<p><strong>ಬೆಂಗಳೂರು:</strong> ‘ಜಯಪ್ರಕಾಶ್ ನಾರಾಯಣ್ (ಜೆ.ಪಿ) ಚಳವಳಿಯಲ್ಲಿ ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿತ್ತು. ಪವಿತ್ರ ಆರ್ಥಿಕತೆಯ ಕ್ರಾಂತಿಗೆ ಯುವಸಮೂಹವೇ ಬೆನ್ನೆಲುಬಾಗಿ ನಿಲ್ಲಬೇಕು’ ಎಂದು ರಂಗಕರ್ಮಿ ಪ್ರಸನ್ನ ಹೇಳಿದರು.</p>.<p>ಜೆ.ಪಿ. ಜನ್ಮದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೊಸ ಸಭ್ಯತೆ ನಿರ್ಮಾಣ ಮಾಡುವ ಅಗತ್ಯವಿದೆ’ ಎಂದರು.</p>.<p>ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ, ‘ಪವಿತ್ರ ಆರ್ಥಿಕತೆ ಜಾರಿಗೆ ಒತ್ತಾಯಿಸಿ ಪ್ರಸನ್ನ ಉಪವಾಸ ಸತ್ಯಾಗ್ರಹ ಆರಂಭಿಸಿ ನಾಲ್ಕು ದಿನಗಳಾದರೂ, ಸರ್ಕಾರಿ ವೈದ್ಯರು ಬಂದು ಅವರ ಆರೋಗ್ಯ ತಪಾಸಣೆ ಮಾಡಲಿಲ್ಲ. ಸರ್ಕಾರ ಕೂಡ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಗ್ರಾಮ ಸೇವಾ ಸಂಘದ ವತಿಯಿಂದ ರಾಮಕೃಷ್ಣ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಸರೋಜಮ್ಮ ಎಂ. ಚಂದ್ರಶೇಖರ್ ಅವರಿಗೆ ಜೆ.ಪಿ. ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜಯಪ್ರಕಾಶ್ ನಾರಾಯಣ್ (ಜೆ.ಪಿ) ಚಳವಳಿಯಲ್ಲಿ ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿತ್ತು. ಪವಿತ್ರ ಆರ್ಥಿಕತೆಯ ಕ್ರಾಂತಿಗೆ ಯುವಸಮೂಹವೇ ಬೆನ್ನೆಲುಬಾಗಿ ನಿಲ್ಲಬೇಕು’ ಎಂದು ರಂಗಕರ್ಮಿ ಪ್ರಸನ್ನ ಹೇಳಿದರು.</p>.<p>ಜೆ.ಪಿ. ಜನ್ಮದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೊಸ ಸಭ್ಯತೆ ನಿರ್ಮಾಣ ಮಾಡುವ ಅಗತ್ಯವಿದೆ’ ಎಂದರು.</p>.<p>ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತ, ‘ಪವಿತ್ರ ಆರ್ಥಿಕತೆ ಜಾರಿಗೆ ಒತ್ತಾಯಿಸಿ ಪ್ರಸನ್ನ ಉಪವಾಸ ಸತ್ಯಾಗ್ರಹ ಆರಂಭಿಸಿ ನಾಲ್ಕು ದಿನಗಳಾದರೂ, ಸರ್ಕಾರಿ ವೈದ್ಯರು ಬಂದು ಅವರ ಆರೋಗ್ಯ ತಪಾಸಣೆ ಮಾಡಲಿಲ್ಲ. ಸರ್ಕಾರ ಕೂಡ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಗ್ರಾಮ ಸೇವಾ ಸಂಘದ ವತಿಯಿಂದ ರಾಮಕೃಷ್ಣ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಸರೋಜಮ್ಮ ಎಂ. ಚಂದ್ರಶೇಖರ್ ಅವರಿಗೆ ಜೆ.ಪಿ. ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>