ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ.ಎಂ. ದೇವರಾಜ್ ಅವರು, ‘ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ತಮಿಳುನಾಡಿನ ಮಾದರಿಯಲ್ಲಿ ಅರುಂಧತಿಯರ್ ಸಮುದಾಯಕ್ಕೆ ಶೇ 2.84 ರಷ್ಟು ಮೀಸಲಾತಿಯನ್ನು ನೀಡಿದಂತೆ ಸುಪ್ರೀಂ ಕೋರ್ಟ್ ನ್ಯಾ. ಅರುಣ್ ಮಿಶ್ರಾ ತೀರ್ಪಿನಂತೆ ರಾಜ್ಯ ಸರ್ಕಾರಕ್ಕಿರುವ ಅಧಿಕಾರವನ್ನು ಬಳಸಿಕೊಂಡು ಪ್ರತ್ಯೇಕವಾಗಿ ಮಾದಿಗ–ಮಾದಿಗ ಸಂಬಂಧಿತ ಜಾತಿಗಳಿಗೆ ಶೇ 6ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.