‘ವಿದ್ಯಾರ್ಥಿ ಅನಿಲ್ ವಾಸವಿದ್ದ ಪೇಯಿಂಗ್ ಗೆಸ್ಟ್ ಕಟ್ಟಡ, ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿದೆ. ಜೆ.ಪಿ.ನಗರ ಠಾಣೆಯ ಎಎಸ್ಐ ರಮೇಶ್ ಹಾಗೂ ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್, ನಿಯಂತ್ರಣ ಕೊಠಡಿಯಿಂದ ಮಾಹಿತಿ ಬರುತ್ತಿದ್ದಂತೆ ಠಾಣೆ ಗಡಿ ಲೆಕ್ಕಿಸದೇ ಸ್ಥಳಕ್ಕೆ ಹೋಗಿ ವಿದ್ಯಾರ್ಥಿಯನ್ನು ರಕ್ಷಿಸಿದ್ದಾರೆ. ಇವರಿಬ್ಬರ ಕೆಲಸ ಮೆಚ್ಚುವಂಥದ್ದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.