ಜಾರ್ಖಂಡ್ ಮಾದರಿಯಲ್ಲಿ ಕೊಲೆ ಬೆದರಿಕೆ: ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ಪಾಟೀಲ, ‘ಜಾರ್ಖಂಡ್ನಲ್ಲಿ ನ್ಯಾಯಾಧೀಶ ರೊಬ್ಬರನ್ನು ಕೊಲೆ ಮಾಡಿದ ರೀತಿಯಲ್ಲೇ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕಾನೂನು ಬಾಹಿರ ಚಟುವಟಿಕೆಗಳ ತಡೆ (ಯುಎಪಿ) ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಹೀಗಾಗಿ, ಜಾಮೀನು ನೀಡಬಾರದು’ ಎಂದು ಹೇಳಿದ್ದರು. ‘ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದು ಹೇಗೆ ? ಅವರಿಗೆ ಇರುವ ಭದ್ರತೆಗಳೇನು? ಎಂಬುದನ್ನು ತಿಳಿದುಕೊಳ್ಳಲು ಆರೋಪಿ, ಯೂಟ್ಯೂಬ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳಲ್ಲಿ ಹುಡುಕಾಡಿದ್ದ’ ಎಂದೂ ಪಾಟೀಲ ವಾದಿಸಿದ್ದರು.