<p><strong>ಬೆಂಗಳೂರು:</strong>‘ಪತ್ರಕರ್ತರು ಮತ್ತು ನ್ಯಾಯಾಧೀಶರು ನಿಷ್ಪಕ್ಷಪಾತರಾಗಿ ಕೆಲಸ ಮಾಡಬೇಕು’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅಭಿಪ್ರಾಯಪಟ್ಟರು.</p>.<p>ನ್ಯಾಷನಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಬುಧವಾರ ನಡೆದ 'ನ್ಯಾಯಾಂಗ ಮತ್ತು ಮಾಧ್ಯಮ' ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಸಮಾಜದಲ್ಲಿ ನ್ಯಾಯಾಂಗ ಮತ್ತು ಪತ್ರಿಕೋದ್ಯಮದ ಪಾತ್ರ ಹಿರಿದಾಗಿದ್ದು, ಅದನ್ನು ಅರಿತು ನಾವು ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂವಾದದಲ್ಲಿ ಮಾಧ್ಯಮ ಮತ್ತು ನ್ಯಾಯಾಂಗದ ಕುರಿತ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.</p>.<p>ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಪಾದಕತ್ವದಲ್ಲಿ ಹೊರತರುವ ಕಾಲೇಜಿನ ಪತ್ರಿಕೆ 'ದಿ ಎನ್ ಸಿಜೆ ಟೈಮ್ಸ್' ಹಾಗೂ ಚನ್ನಪಟ್ಟಣ ಗೊಂಬೆಗಳ ಕುರಿತ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಲಾಯಿತು.</p>.<p>ನ್ಯಾಷನಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಎಸ್ ಎನ್. ನಾಗರಾಜ ರೆಡ್ಡಿ, ಪ್ರಾಂಶುಪಾಲರಾದ ಡಾ.ವೈ.ಸಿ.ಕಮಲ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಸ್. ಜಯಸಿಂಹ, ಡಾ. ವೈಶಾಲಿ ಎಚ್.ಬಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಪತ್ರಕರ್ತರು ಮತ್ತು ನ್ಯಾಯಾಧೀಶರು ನಿಷ್ಪಕ್ಷಪಾತರಾಗಿ ಕೆಲಸ ಮಾಡಬೇಕು’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅಭಿಪ್ರಾಯಪಟ್ಟರು.</p>.<p>ನ್ಯಾಷನಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಬುಧವಾರ ನಡೆದ 'ನ್ಯಾಯಾಂಗ ಮತ್ತು ಮಾಧ್ಯಮ' ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಸಮಾಜದಲ್ಲಿ ನ್ಯಾಯಾಂಗ ಮತ್ತು ಪತ್ರಿಕೋದ್ಯಮದ ಪಾತ್ರ ಹಿರಿದಾಗಿದ್ದು, ಅದನ್ನು ಅರಿತು ನಾವು ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂವಾದದಲ್ಲಿ ಮಾಧ್ಯಮ ಮತ್ತು ನ್ಯಾಯಾಂಗದ ಕುರಿತ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.</p>.<p>ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಪಾದಕತ್ವದಲ್ಲಿ ಹೊರತರುವ ಕಾಲೇಜಿನ ಪತ್ರಿಕೆ 'ದಿ ಎನ್ ಸಿಜೆ ಟೈಮ್ಸ್' ಹಾಗೂ ಚನ್ನಪಟ್ಟಣ ಗೊಂಬೆಗಳ ಕುರಿತ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಲಾಯಿತು.</p>.<p>ನ್ಯಾಷನಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಎಸ್ ಎನ್. ನಾಗರಾಜ ರೆಡ್ಡಿ, ಪ್ರಾಂಶುಪಾಲರಾದ ಡಾ.ವೈ.ಸಿ.ಕಮಲ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಸ್. ಜಯಸಿಂಹ, ಡಾ. ವೈಶಾಲಿ ಎಚ್.ಬಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>