ಆರ್ಯವೈಶ್ಯ ಮಹಾಮಂಡಳಿಯ ಅಧ್ಯಕ್ಷ ಟಿ.ಎ.ಶರವಣ, ‘ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂಬ ಉದ್ದೇಶದಿಂದ ಸರ್ಕಾರದ ಮೇಲೆ ಒತ್ತಡ ಹೇರಿ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರಮಿಸಿದ್ದೇನೆ. ನಾನು ಅಧ್ಯಕ್ಷನಾಗಿದ್ದಾಗ ನಿಗಮಕ್ಕೆ ₹11 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಈಗ ಕೇವಲ ₹5 ಕೋಟಿ ನಿಗದಿ ಮಾಡಲಾಗಿದೆ. ಇದರಲ್ಲಿ ₹1 ಕೋಟಿಯನ್ನು ಆಡಳಿತಾತ್ಮಕ ವೆಚ್ಚಕ್ಕೆ ತೆಗೆದಿಟ್ಟರೆ, ಉಳಿದ ಹಣದಲ್ಲಿ ಯಾವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಗುವುದಿಲ್ಲ’ ಎಂದರು.