<p><strong>ಕೆ.ಆರ್.ಪುರ:</strong> ಸಮೀಪದ ಮಂಡೂರಿನ ತಾಲ್ಲೂಕು ಪಂಚಾಯಿತಿ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಪೂರ್ಣಗೊಳಿಸಿದವರಿಗೆ ಪೂರ್ವ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ವಸಂತ್ ಕುಮಾರ್ ಅವರು ಪ್ರಮಾಣಪತ್ರ ವಿತರಿಸಿದರು.</p>.<p>14 ದಿನಗಳು ನಡೆದ ತರಬೇತಿಯಲ್ಲಿ 28 ಮಹಿಳೆಯರು ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳು ಜೂಟ್ ಬ್ಯಾಗ್ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ವಸಂತ್ ಕುಮಾರ್, ‘ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಬೇಕು, ಇದರಿಂದ ಸರ್ಕಾರದ ಉದ್ದೇಶ ಸಫಲವಾಗುತ್ತದೆ’ ಎಂದರು.</p>.<p>ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್ ಮಾತನಾಡಿ, ‘ಯಾರ ಹಂಗೂ ಇಲ್ಲದೆ ಧೈರ್ಯವಾಗಿ ಜೀವನ ನಡೆಸಲು ಇಂಥ ಸ್ವ ಉದ್ಯೋಗ ತರಬೇತಿಗಳು ಪ್ರಯೋಜನಕಾರಿ. ಉಚಿತ ತರಬೇತಿ ನೀಡುವುದು ನಮ್ಮ ಬ್ಯಾಂಕ್ನ ಧ್ಯೇಯವಾಗಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಬಿದರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಲೋಹಿತ್, ಅಧ್ಯಕ್ಷೆ ಕವಿತಾ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ರಾಜೇಶ್, ಕಾರ್ಯದರ್ಶೀ ಗೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಸಮೀಪದ ಮಂಡೂರಿನ ತಾಲ್ಲೂಕು ಪಂಚಾಯಿತಿ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಪೂರ್ಣಗೊಳಿಸಿದವರಿಗೆ ಪೂರ್ವ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ವಸಂತ್ ಕುಮಾರ್ ಅವರು ಪ್ರಮಾಣಪತ್ರ ವಿತರಿಸಿದರು.</p>.<p>14 ದಿನಗಳು ನಡೆದ ತರಬೇತಿಯಲ್ಲಿ 28 ಮಹಿಳೆಯರು ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳು ಜೂಟ್ ಬ್ಯಾಗ್ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ವಸಂತ್ ಕುಮಾರ್, ‘ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಬೇಕು, ಇದರಿಂದ ಸರ್ಕಾರದ ಉದ್ದೇಶ ಸಫಲವಾಗುತ್ತದೆ’ ಎಂದರು.</p>.<p>ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅಂಬರೀಶ್ ಮಾತನಾಡಿ, ‘ಯಾರ ಹಂಗೂ ಇಲ್ಲದೆ ಧೈರ್ಯವಾಗಿ ಜೀವನ ನಡೆಸಲು ಇಂಥ ಸ್ವ ಉದ್ಯೋಗ ತರಬೇತಿಗಳು ಪ್ರಯೋಜನಕಾರಿ. ಉಚಿತ ತರಬೇತಿ ನೀಡುವುದು ನಮ್ಮ ಬ್ಯಾಂಕ್ನ ಧ್ಯೇಯವಾಗಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಬಿದರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಲೋಹಿತ್, ಅಧ್ಯಕ್ಷೆ ಕವಿತಾ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ರಾಜೇಶ್, ಕಾರ್ಯದರ್ಶೀ ಗೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>