<p><strong>ಬೆಂಗಳೂರು:</strong> ಜೆ.ಸಿ.ನಗರದ ಮಿತ್ತಲ್ ಲಕ್ಸುರಿ ಅಪಾರ್ಟ್ಮೆಂಟ್ ಸಮುಚ್ಚಯದ ಫ್ಲ್ಯಾಟ್ನ ಬಾಗಿಲು ಒಡೆದು ಒಳನುಗ್ಗಿದ್ದ ದುಷ್ಕರ್ಮಿಗಳು, ₹50 ಲಕ್ಷ ಮೊತ್ತದ ವಜ್ರದ ಆಭರಣ ಹಾಗೂ ₹10 ಲಕ್ಷ ನಗದು ಕದ್ದೊಯ್ದಿದ್ದಾರೆ.</p>.<p>ಉದ್ಯಮಿ ಸಚಿನ್ ಭಾರತ್ ಎಂಬುವರ ಫ್ಲ್ಯಾಟ್ನಲ್ಲಿ ಕಳ್ಳತನ ನಡೆದಿದ್ದು, ಆ ಸಂಬಂಧ ಜೆ.ಸಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಮನೆಯ ಕೆಲಸದಾಳು ಮಾಲತಿ, ರೋಷನ್, ಪಿಂಟು ಎಂಬುವರ ಮೇಲೆ ಅನುಮಾನವಿದೆ’ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಕೆಲಸದವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.</p>.<p>‘ಸಚಿನ್ ಅವರು ಕುಟುಂಬ ಸಮೇತ ಏಪ್ರಿಲ್ 8ರಂದು ಇಟೆಲಿ ಪ್ರವಾಸಕ್ಕೆ ತೆರಳಿದ್ದರು. ಯಾರೂ ಇಲ್ಲದ ಸಮಯದಲ್ಲೇ ಕಳ್ಳರು, ಮನೆಯ ಲಾಕರ್ ಹಾಗೂ ಬೀರು ಒಡೆದು ವಜ್ರದ ಉಂಗುರ, ವಜ್ರದ ಕೈ ಗಡಿಯಾರ ಸೇರಿದಂತೆ ₹ 50 ಲಕ್ಷ ಮೊತ್ತದ ಆಭರಣ ಕದ್ದಿದ್ದಾರೆ’ ಎಂದು ಜೆ.ಸಿ.ನಗರ ಪೊಲೀಸರು ಹೇಳಿದರು.</p>.<p>‘ಉದ್ಯಮಿ ಕುಟುಂಬಪ್ರವಾಸ ಮುಗಿಸಿ ಏಪ್ರಿಲ್ 26ರಂದು ಮನೆಗೆ ವಾಪಸು ಬಂದಾಗಲೇ ಕಳ್ಳತನದ ವಿಚಾರ ಗೊತ್ತಾಗಿದೆ. ಮನೆ ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆ.ಸಿ.ನಗರದ ಮಿತ್ತಲ್ ಲಕ್ಸುರಿ ಅಪಾರ್ಟ್ಮೆಂಟ್ ಸಮುಚ್ಚಯದ ಫ್ಲ್ಯಾಟ್ನ ಬಾಗಿಲು ಒಡೆದು ಒಳನುಗ್ಗಿದ್ದ ದುಷ್ಕರ್ಮಿಗಳು, ₹50 ಲಕ್ಷ ಮೊತ್ತದ ವಜ್ರದ ಆಭರಣ ಹಾಗೂ ₹10 ಲಕ್ಷ ನಗದು ಕದ್ದೊಯ್ದಿದ್ದಾರೆ.</p>.<p>ಉದ್ಯಮಿ ಸಚಿನ್ ಭಾರತ್ ಎಂಬುವರ ಫ್ಲ್ಯಾಟ್ನಲ್ಲಿ ಕಳ್ಳತನ ನಡೆದಿದ್ದು, ಆ ಸಂಬಂಧ ಜೆ.ಸಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಮನೆಯ ಕೆಲಸದಾಳು ಮಾಲತಿ, ರೋಷನ್, ಪಿಂಟು ಎಂಬುವರ ಮೇಲೆ ಅನುಮಾನವಿದೆ’ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಕೆಲಸದವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.</p>.<p>‘ಸಚಿನ್ ಅವರು ಕುಟುಂಬ ಸಮೇತ ಏಪ್ರಿಲ್ 8ರಂದು ಇಟೆಲಿ ಪ್ರವಾಸಕ್ಕೆ ತೆರಳಿದ್ದರು. ಯಾರೂ ಇಲ್ಲದ ಸಮಯದಲ್ಲೇ ಕಳ್ಳರು, ಮನೆಯ ಲಾಕರ್ ಹಾಗೂ ಬೀರು ಒಡೆದು ವಜ್ರದ ಉಂಗುರ, ವಜ್ರದ ಕೈ ಗಡಿಯಾರ ಸೇರಿದಂತೆ ₹ 50 ಲಕ್ಷ ಮೊತ್ತದ ಆಭರಣ ಕದ್ದಿದ್ದಾರೆ’ ಎಂದು ಜೆ.ಸಿ.ನಗರ ಪೊಲೀಸರು ಹೇಳಿದರು.</p>.<p>‘ಉದ್ಯಮಿ ಕುಟುಂಬಪ್ರವಾಸ ಮುಗಿಸಿ ಏಪ್ರಿಲ್ 26ರಂದು ಮನೆಗೆ ವಾಪಸು ಬಂದಾಗಲೇ ಕಳ್ಳತನದ ವಿಚಾರ ಗೊತ್ತಾಗಿದೆ. ಮನೆ ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>