‘ಜ್ಯೋತಿ ನಿವಾಸ್ ಕಾಲೇಜು ಸ್ವಾಯತ್ತ ಶಿಕ್ಷಣಸಂಸ್ಥೆಯಾಗಿದ್ದು, ವಿಶ್ವವಿದ್ಯಾಲಯ ಆಗುವ ಎಲ್ಲ ಅರ್ಹತೆ ಹೊಂದಿದೆ. ಸಂಸ್ಥೆ ಪ್ರಯತ್ನಿಸಿದರೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಜತೆಗೆ, ಯಾವುದಾದರೊಂದು ಸರ್ಕಾರಿ ಕಾಲೇಜನ್ನು ದತ್ತು ಪಡೆಯಬೇಕು ಎಂಬುದು ನನ್ನ ಬಯಕೆ’ ಎಂದು ಉಪ ಮುಖ್ಯಮಂತ್ರಿ ಹೇಳಿದರು. ಅದಕ್ಕೆ ಸ್ಪಂದಿಸಿದ ಪ್ರಾಂಶುಪಾಲರು, ಯಾವ ಕಾಲೇಜು ಎಂದು ಸೂಚಿಸಿದರೆ ಕಾರ್ಯಪ್ರವೃತ್ತರಾಗುವುದಾಗಿ ಭರವಸೆ ನೀಡಿದರು.