ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್ ಸಂಖ್ಯೆ‌ ತೋರಿಸಿದರೆ 5 ಕೆ.ಜಿ ಉಚಿತ ಅಕ್ಕಿ: ಗೋಪಾಲಯ್ಯ

Last Updated 22 ಮೇ 2020, 21:10 IST
ಅಕ್ಷರ ಗಾತ್ರ

ಬೆಂಗಳೂರು: ‘ಯಾರ ಬಳಿ ಪಡಿತರ ಚೀಟಿ ಇಲ್ಲವೋ ಅವರು ಇದೇ 26ರಿಂದ 31ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಆಧಾರ್‌ ಕಾರ್ಡ್ ತೋರಿಸಿ ಉಚಿತವಾಗಿ 5 ಕೆ.ಜಿ.ಅಕ್ಕಿ ಪಡೆಯಬಹುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಶುಕ್ರವಾರ ನಗರದ ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ 4 ಸಾವಿರ ಮಂದಿ ಆಟೊ, ಲಾರಿ, ಟೆಂಪೊ ಮತ್ತು ಬಸ್ ಚಾಲಕರಿಗೆ ಉಚಿತ ಆಹಾರ ಕಿಟ್ ವಿತರಿಸಿದ ಅವರು ಮಾತನಾಡಿದರು.

‘ಜೂನ್ 1 ರಿಂದ 10ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುವುದು’ ಎಂದರು.

‘ಆಟೊ ಚಾಲಕರಿಗೆ ನೀಡಲಾಗುವ ₹ 5 ಸಾವಿರ ದುಡ್ಡು ಪಡೆಯಲು ಮಧ್ಯವರ್ತಿಗಳ ಮೊರೆ ಹೋಗಬೇಕಿಲ್ಲ. ನನ್ನ ಕಚೇರಿಯಿಂದಲೂ ದಾಖಲೆ ಒದಗಿಸುವ ಕೆಲಸ ನಡೆಯಲಿದೆ. ಅದನ್ನು ಬಳಸಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT