<p><strong>ಬೆಂಗಳೂರು:</strong> ‘ಯಾರ ಬಳಿ ಪಡಿತರ ಚೀಟಿ ಇಲ್ಲವೋ ಅವರು ಇದೇ 26ರಿಂದ 31ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆ.ಜಿ.ಅಕ್ಕಿ ಪಡೆಯಬಹುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ಶುಕ್ರವಾರ ನಗರದ ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ 4 ಸಾವಿರ ಮಂದಿ ಆಟೊ, ಲಾರಿ, ಟೆಂಪೊ ಮತ್ತು ಬಸ್ ಚಾಲಕರಿಗೆ ಉಚಿತ ಆಹಾರ ಕಿಟ್ ವಿತರಿಸಿದ ಅವರು ಮಾತನಾಡಿದರು.</p>.<p>‘ಜೂನ್ 1 ರಿಂದ 10ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುವುದು’ ಎಂದರು.</p>.<p>‘ಆಟೊ ಚಾಲಕರಿಗೆ ನೀಡಲಾಗುವ ₹ 5 ಸಾವಿರ ದುಡ್ಡು ಪಡೆಯಲು ಮಧ್ಯವರ್ತಿಗಳ ಮೊರೆ ಹೋಗಬೇಕಿಲ್ಲ. ನನ್ನ ಕಚೇರಿಯಿಂದಲೂ ದಾಖಲೆ ಒದಗಿಸುವ ಕೆಲಸ ನಡೆಯಲಿದೆ. ಅದನ್ನು ಬಳಸಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಯಾರ ಬಳಿ ಪಡಿತರ ಚೀಟಿ ಇಲ್ಲವೋ ಅವರು ಇದೇ 26ರಿಂದ 31ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆ.ಜಿ.ಅಕ್ಕಿ ಪಡೆಯಬಹುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ಶುಕ್ರವಾರ ನಗರದ ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ 4 ಸಾವಿರ ಮಂದಿ ಆಟೊ, ಲಾರಿ, ಟೆಂಪೊ ಮತ್ತು ಬಸ್ ಚಾಲಕರಿಗೆ ಉಚಿತ ಆಹಾರ ಕಿಟ್ ವಿತರಿಸಿದ ಅವರು ಮಾತನಾಡಿದರು.</p>.<p>‘ಜೂನ್ 1 ರಿಂದ 10ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುವುದು’ ಎಂದರು.</p>.<p>‘ಆಟೊ ಚಾಲಕರಿಗೆ ನೀಡಲಾಗುವ ₹ 5 ಸಾವಿರ ದುಡ್ಡು ಪಡೆಯಲು ಮಧ್ಯವರ್ತಿಗಳ ಮೊರೆ ಹೋಗಬೇಕಿಲ್ಲ. ನನ್ನ ಕಚೇರಿಯಿಂದಲೂ ದಾಖಲೆ ಒದಗಿಸುವ ಕೆಲಸ ನಡೆಯಲಿದೆ. ಅದನ್ನು ಬಳಸಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>