<p><strong>ದಾಬಸ್ ಪೇಟೆ:</strong> ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಮೊದಲಿಗೆ ಇ-ಪರಿಸರ ಪ್ರೈವೇಟ್ ಲಿಮಿಟೆಡ್ಗೆ ಭೇಟಿ ನೀಡಿದ ಅವರು, ನಗರ ಇ-ತ್ಯಾಜ್ಯವನ್ನು ವೈಜ್ಞಾನಿಕ ಮಾದರಿಯಲ್ಲಿ ಮತ್ತು ಕಡಿಮೆ ಖರ್ಚಿನಲ್ಲಿ ಬೇರ್ಪಡಿಸುತ್ತಿರುವುದನ್ನು ವೀಕ್ಷಿಸಿದರು. ನಂತರ ತ್ರಿವೇಣಿ ಎಂಜಿನಿಯರಿಂಗ್ ಲಿಮಿಟೆಡ್ನ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿದರು. ಪೊಲೀಸ್ ಪಹರೆಯನ್ನು ಹೆಚ್ಚಿಸಬೇಕು ಎಂದು ಆಡಳಿತ ಮಂಡಳಿಯವರು ಮನವಿ ಮಾಡಿಕೊಂಡರು.</p>.<p>ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ಚರ್ಚಿಸುತ್ತೇನೆ ಎಂದು ಜಾರ್ಜ್ ಭರವಸೆ ನೀಡಿದರು. ಕಲ್ಪತರು ಬ್ರೆವರೀಸ್ ಆ್ಯಂಡ್ ಡಿಸ್ಟಿಲರಿಯಲ್ಲಿ ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>‘ಜಿಂದಾಲ್ಗೆ ಭೂಮಿ ಕೊಟ್ಟಿರುವ ಸಿಟ್ಟಿಗೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 2006ರಲ್ಲೇ ಅಂದಿನ ಸರ್ಕಾರ ಗುತ್ತಿಗೆ ಹಾಗೂ ಮಾರಾಟ ಒಪ್ಪಂದ ಮಾಡಿಕೊಂಡಿತ್ತು. ಈ ಸಂಬಂಧ ಅವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು. ಭೂಮಿ ಕೊಡುವ ವಿಷಯದ ಸಂಬಂಧ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಿಂಗ್ ಅವರಿಗೆ ಸಮಸ್ಯೆ ಇದ್ದರೆ ಅಲ್ಲೇ ಬಗೆಹರಿಸಿಕೊಳ್ಳಬಹುದಿತ್ತು. ರಾಜೀನಾಮೆ ಕೊಡುವ ವಿಚಾರ ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಮೊದಲಿಗೆ ಇ-ಪರಿಸರ ಪ್ರೈವೇಟ್ ಲಿಮಿಟೆಡ್ಗೆ ಭೇಟಿ ನೀಡಿದ ಅವರು, ನಗರ ಇ-ತ್ಯಾಜ್ಯವನ್ನು ವೈಜ್ಞಾನಿಕ ಮಾದರಿಯಲ್ಲಿ ಮತ್ತು ಕಡಿಮೆ ಖರ್ಚಿನಲ್ಲಿ ಬೇರ್ಪಡಿಸುತ್ತಿರುವುದನ್ನು ವೀಕ್ಷಿಸಿದರು. ನಂತರ ತ್ರಿವೇಣಿ ಎಂಜಿನಿಯರಿಂಗ್ ಲಿಮಿಟೆಡ್ನ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿದರು. ಪೊಲೀಸ್ ಪಹರೆಯನ್ನು ಹೆಚ್ಚಿಸಬೇಕು ಎಂದು ಆಡಳಿತ ಮಂಡಳಿಯವರು ಮನವಿ ಮಾಡಿಕೊಂಡರು.</p>.<p>ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ಚರ್ಚಿಸುತ್ತೇನೆ ಎಂದು ಜಾರ್ಜ್ ಭರವಸೆ ನೀಡಿದರು. ಕಲ್ಪತರು ಬ್ರೆವರೀಸ್ ಆ್ಯಂಡ್ ಡಿಸ್ಟಿಲರಿಯಲ್ಲಿ ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>‘ಜಿಂದಾಲ್ಗೆ ಭೂಮಿ ಕೊಟ್ಟಿರುವ ಸಿಟ್ಟಿಗೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 2006ರಲ್ಲೇ ಅಂದಿನ ಸರ್ಕಾರ ಗುತ್ತಿಗೆ ಹಾಗೂ ಮಾರಾಟ ಒಪ್ಪಂದ ಮಾಡಿಕೊಂಡಿತ್ತು. ಈ ಸಂಬಂಧ ಅವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು. ಭೂಮಿ ಕೊಡುವ ವಿಷಯದ ಸಂಬಂಧ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಿಂಗ್ ಅವರಿಗೆ ಸಮಸ್ಯೆ ಇದ್ದರೆ ಅಲ್ಲೇ ಬಗೆಹರಿಸಿಕೊಳ್ಳಬಹುದಿತ್ತು. ರಾಜೀನಾಮೆ ಕೊಡುವ ವಿಚಾರ ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>