ಭಾನುವಾರ, ಮಾರ್ಚ್ 26, 2023
24 °C

ತಿಗಳ ಸಮುದಾಯದ ಏಳಿಗೆಗೆ ಶ್ರಮಿಸಿ: ಪ್ರಣವಾನಂದಪುರಿ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಒಂದು ಸಮುದಾಯ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಏಳಿಗೆಯಾದರೇ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ’ ಎಂದು ಶಿವನಾಪುರ ಆದಿಶಕ್ತಿ ಸಂಸ್ಥಾನ ಮಠದ ಪ್ರಣವಾನಂದಪುರಿ ಸ್ವಾಮೀಜಿ ತಿಳಿಸಿದರು.

ಬೆಂಗಳೂರು ಪೂರ್ವ ತಾಲ್ಲೂಕು ತಿಗಳರ (ವಹ್ನಿಕುಲ ಕ್ಷತ್ರಿಯ) ಕ್ಷೇಮಾಭಿವೃದ್ಧಿ ಸಂಘವು ರಾಂಪುರ ಗ್ರಾಮದಲ್ಲಿ ಆಯೋಜಿಸಿದ್ದ ಸಂಘದ ವಾರ್ಷಿಕೋತ್ಸವ ಹಾಗೂ ಸರ್ವಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಸಮುದಾಯವನ್ನು ಗುರುತಿಸಬೇಕಾದರೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮೊದಲು ಸದೃಢರಾಗಬೇಕು. ಆಗ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ತಿಗಳ ಸಮುದಾಯದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಸಮಾಜದ ಹಣವಂತರು ಸಹಾಯ ಮಾಡುವ ಮೂಲಕ ಅವರ ಶಿಕ್ಷಣಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು’ ಎಂದು ಕಿವಿಮಾತು ಹೇಳಿದರು.

ಪೂರ್ವ ತಾಲ್ಲೂಕು ತಿಗಳರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಂ.ವೇಣುಗೋಪಾಲ್,‘ನಮ್ಮ ಸಮುದಾಯದವರು ಆರ್ಥಿಕವಾಗಿ ಸಬಲರಾಗಿದ್ದು, ರಾಜಕೀಯ ಕ್ಷೇತ್ರದಲ್ಲೂ ಹೆಚ್ಚಾಗಿ ಗುರುತಿಸಿಕೊಳ್ಳಬೇಕು. ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಬೇಕು. ಸಮುದಾಯದ ಪ್ರಬಲರನ್ನ ಆಯ್ಕೆ ಮಾಡಿ ಅವರಿಗೆ ಬೆಂಬಲ ನೀಡಬೇಕು’ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.