ಪೂರ್ವ ತಾಲ್ಲೂಕು ತಿಗಳರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಂ.ವೇಣುಗೋಪಾಲ್,‘ನಮ್ಮ ಸಮುದಾಯದವರು ಆರ್ಥಿಕವಾಗಿ ಸಬಲರಾಗಿದ್ದು, ರಾಜಕೀಯ ಕ್ಷೇತ್ರದಲ್ಲೂ ಹೆಚ್ಚಾಗಿ ಗುರುತಿಸಿಕೊಳ್ಳಬೇಕು. ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಬೇಕು. ಸಮುದಾಯದ ಪ್ರಬಲರನ್ನ ಆಯ್ಕೆ ಮಾಡಿ ಅವರಿಗೆ ಬೆಂಬಲ ನೀಡಬೇಕು’ ಎಂದು ಹೇಳಿದರು.