ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ‘ರಸ್ತೆ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಕಡಿಮೆಮಾಡಲು ನಾಲ್ಕು ಅತ್ಯಾಧುನಿಕ ತುರ್ತು ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೂ ನೆರವು ನೀಡುವಂತೆ ಮನವಿ ಮಾಡಿದ್ದೇನೆ. ಕ್ಯಾನ್ಸರ್, ಮೂತ್ರಪಿಂಡ ರೋಗಗಳು, ಹೃದ್ರೋಗ ಮತ್ತಿತರ ತೀವ್ರ ಸ್ವರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳುಳ್ಳ ಹೆಲ್ತ್ ಸಿಟಿ ನಿರ್ಮಾಣಕ್ಕೂ ನೆರವು ಕೋರಿದ್ದೇನೆ' ಎಂದು ತಿಳಿಸಿದ್ದಾರೆ.