<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಪಿ.ಸಿ.ಆಂಥೋನಿ ಸ್ವಾಮಿ ಹಾಗೂ ಬಿ.ಎಸ್.ತಲ್ವಾಡಿ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿ ತಲಾ ₹10 ಸಾವಿರ ನಗದು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಆಯ್ಕೆ ಮಾಡಿದೆ. ಪ್ರತಿ ವರ್ಷ ಕನ್ನಡ ಕ್ರೈಸ್ತ ಸಾಧಕರೊಬ್ಬರು ಹಾಗೂ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿರುವ ಒಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ. </p>.<p>ಉತ್ತರ ಕನ್ನಡ ಜಿಲ್ಲೆಯ ಕಮ್ಮನಹಳ್ಳಿಯ ಪಿ.ಸಿ.ಆಂಥೋನಿ ಸ್ವಾಮಿ ಅವರು, ನವದೆಹಲಿಯಲ್ಲೂ ಕನ್ನಡ ಪರ ಕಾರ್ಯಚಟುವಟಿಕೆ ಕೈಗೊಂಡಿದ್ದರು. ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿದ ಬಳಿಕ, ಕನ್ನಡ ಪರ ಹೋರಾಟಗಳಲ್ಲಿಯೂ ಸಕ್ರಿಯರಾದರು. ಚರ್ಚ್ಗಳಲ್ಲಿ ಕನ್ನಡ ಬಳಕೆ ಕುರಿತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.</p>.<p>ಬಿ.ಎಸ್.ತಲ್ವಾಡಿ ಅವರು ಗಡಿನಾಡು ಪ್ರದೇಶ ತಾಳವಾಡಿಯವರು. ಜನಪದ ವಿದ್ವಾಂಸರಾಗಿ, ವಿಮರ್ಶಕರಾಗಿ, ಬರಹಗಾರರಾಗಿ, ಗಾಯಕರಾಗಿ ಗುರುತಿಸಿಕೊಂಡಿದ್ದಾರೆ. ಯೇಸು ಕ್ರಿಸ್ತನ ಕುರಿತು ಮಹಾಕಾವ್ಯವನ್ನು ರಚಿಸಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಪಿ.ಸಿ.ಆಂಥೋನಿ ಸ್ವಾಮಿ ಹಾಗೂ ಬಿ.ಎಸ್.ತಲ್ವಾಡಿ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿ ತಲಾ ₹10 ಸಾವಿರ ನಗದು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಆಯ್ಕೆ ಮಾಡಿದೆ. ಪ್ರತಿ ವರ್ಷ ಕನ್ನಡ ಕ್ರೈಸ್ತ ಸಾಧಕರೊಬ್ಬರು ಹಾಗೂ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿರುವ ಒಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ. </p>.<p>ಉತ್ತರ ಕನ್ನಡ ಜಿಲ್ಲೆಯ ಕಮ್ಮನಹಳ್ಳಿಯ ಪಿ.ಸಿ.ಆಂಥೋನಿ ಸ್ವಾಮಿ ಅವರು, ನವದೆಹಲಿಯಲ್ಲೂ ಕನ್ನಡ ಪರ ಕಾರ್ಯಚಟುವಟಿಕೆ ಕೈಗೊಂಡಿದ್ದರು. ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿದ ಬಳಿಕ, ಕನ್ನಡ ಪರ ಹೋರಾಟಗಳಲ್ಲಿಯೂ ಸಕ್ರಿಯರಾದರು. ಚರ್ಚ್ಗಳಲ್ಲಿ ಕನ್ನಡ ಬಳಕೆ ಕುರಿತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.</p>.<p>ಬಿ.ಎಸ್.ತಲ್ವಾಡಿ ಅವರು ಗಡಿನಾಡು ಪ್ರದೇಶ ತಾಳವಾಡಿಯವರು. ಜನಪದ ವಿದ್ವಾಂಸರಾಗಿ, ವಿಮರ್ಶಕರಾಗಿ, ಬರಹಗಾರರಾಗಿ, ಗಾಯಕರಾಗಿ ಗುರುತಿಸಿಕೊಂಡಿದ್ದಾರೆ. ಯೇಸು ಕ್ರಿಸ್ತನ ಕುರಿತು ಮಹಾಕಾವ್ಯವನ್ನು ರಚಿಸಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>