<p><strong>ಬೆಂಗಳೂರು: </strong>ನಗರದ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದ ಬಳಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆ ಮತ್ತೆ ಕಳೆಗಟ್ಟಿದೆ.</p>.<p>ಕಡಲೆಕಾಯಿ ಪರಿಷೆ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಾತ್ರೆಯ ಆರಂಭಕ್ಕೆ ಇಲ್ಲಿನ ಬೀದಿಗಳಲ್ಲಿ ಎರಡು ದಿನಗಳ ಮುಂಚಿತವಾಗಿಯೇ ಸಂಭ್ರಮ ಮನೆ ಮಾಡಿದೆ. ರಸ್ತೆಯ ಇಕ್ಕೆಲಗಳಲ್ಲಿ ಕಡಲೆಕಾಯಿ ರಾಶಿಗಳು ಗಮನ ಸೆಳೆಯುತ್ತಿವೆ. ಕಡಲೆಕಾಯಿ ಖರೀದಿಸಲು ಭಾನುವಾರ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.</p>.<p>ಮುಜರಾಯಿ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದೊಂದಿಗೆ ನಡೆಯುವ ಕಡಲೆಕಾಯಿ ಪರಿಷೆಗೆ ಸೋಮವಾರ ಬೆಳ್ಳಿಗೆ 10.30ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ, ನಂದಿಗೆ ಕಡಲೆಕಾಯಿ ಅಭಿಷೇಕ ಮಾಡಲಾಗುತ್ತದೆ.</p>.<p>ಕೋವಿಡ್ ಕಾರಣಕ್ಕೆ ಕಳೆದ ವರ್ಷ ಪರಿಷೆಗೆ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಇದರಿಂದ, ಕಡಲೆಕಾಯಿ ವ್ಯಾಪಾರ ವಹಿವಾಟು ನಡೆದಿರಲಿಲ್ಲ.</p>.<p>ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಬಿಬಿಎಂಪಿ ನಿರ್ಬಂಧ ಹೇರಿದೆ. ಕಡಲೆಕಾಯಿ ಜತೆಗೆ ಆಟಿಕೆಗಳು, ಕರಕುಶಲ ವಸ್ತುಗಳು, ತಿಂಡಿ ತಿನಿಸುಗಳ ಮಳಿಗೆಗಳ ವ್ಯಾಪಾರ ವಹಿವಾಟವೂ ಜೋರಾಗಿ ನಡೆಯುತ್ತಿದೆ.ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಬೀದಿಯ ಎರಡೂ ಬದಿ ಅಂಗಡಿಗಳನ್ನು ತೆರೆಯಲಾಗಿದೆ.</p>.<p>ಪರಿಷೆ ನಡೆಯುತ್ತಿರುವುದರಿಂದ ಈ ಪ್ರದೇಶದಲ್ಲಿ ದಟ್ಟಣೆ ನಿಯಂತ್ರಣಕ್ಕಾಗಿ ವಾಹನಗಳ ಸಂಚಾರ ಮಾರ್ಗಗಳನ್ನು ಡಿ.1ರವರೆಗೆ ಬದಲಾವಣೆ ಮಾಡಲಾಗಿದೆ.</p>.<p>ನವಂಬರ್ ತಿಂಗಳಲ್ಲಿ ಕಾರ್ತಿಕ ಮಾಸದ ಕೊನೆ ಸೋಮವಾರ ಕಡಲೆಕಾಯಿ ಪರಿಷೆ ಆಚರಿಸಲಾಗುತ್ತದೆ. ಪರಂಪರಾನುಗತವಾಗಿ ನಡೆಯುತ್ತಾ ಬಂದಿರುವ ಈ ಪರಿಷೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದ ಬಳಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆ ಮತ್ತೆ ಕಳೆಗಟ್ಟಿದೆ.</p>.<p>ಕಡಲೆಕಾಯಿ ಪರಿಷೆ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಾತ್ರೆಯ ಆರಂಭಕ್ಕೆ ಇಲ್ಲಿನ ಬೀದಿಗಳಲ್ಲಿ ಎರಡು ದಿನಗಳ ಮುಂಚಿತವಾಗಿಯೇ ಸಂಭ್ರಮ ಮನೆ ಮಾಡಿದೆ. ರಸ್ತೆಯ ಇಕ್ಕೆಲಗಳಲ್ಲಿ ಕಡಲೆಕಾಯಿ ರಾಶಿಗಳು ಗಮನ ಸೆಳೆಯುತ್ತಿವೆ. ಕಡಲೆಕಾಯಿ ಖರೀದಿಸಲು ಭಾನುವಾರ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.</p>.<p>ಮುಜರಾಯಿ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದೊಂದಿಗೆ ನಡೆಯುವ ಕಡಲೆಕಾಯಿ ಪರಿಷೆಗೆ ಸೋಮವಾರ ಬೆಳ್ಳಿಗೆ 10.30ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ, ನಂದಿಗೆ ಕಡಲೆಕಾಯಿ ಅಭಿಷೇಕ ಮಾಡಲಾಗುತ್ತದೆ.</p>.<p>ಕೋವಿಡ್ ಕಾರಣಕ್ಕೆ ಕಳೆದ ವರ್ಷ ಪರಿಷೆಗೆ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಇದರಿಂದ, ಕಡಲೆಕಾಯಿ ವ್ಯಾಪಾರ ವಹಿವಾಟು ನಡೆದಿರಲಿಲ್ಲ.</p>.<p>ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಬಿಬಿಎಂಪಿ ನಿರ್ಬಂಧ ಹೇರಿದೆ. ಕಡಲೆಕಾಯಿ ಜತೆಗೆ ಆಟಿಕೆಗಳು, ಕರಕುಶಲ ವಸ್ತುಗಳು, ತಿಂಡಿ ತಿನಿಸುಗಳ ಮಳಿಗೆಗಳ ವ್ಯಾಪಾರ ವಹಿವಾಟವೂ ಜೋರಾಗಿ ನಡೆಯುತ್ತಿದೆ.ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಬೀದಿಯ ಎರಡೂ ಬದಿ ಅಂಗಡಿಗಳನ್ನು ತೆರೆಯಲಾಗಿದೆ.</p>.<p>ಪರಿಷೆ ನಡೆಯುತ್ತಿರುವುದರಿಂದ ಈ ಪ್ರದೇಶದಲ್ಲಿ ದಟ್ಟಣೆ ನಿಯಂತ್ರಣಕ್ಕಾಗಿ ವಾಹನಗಳ ಸಂಚಾರ ಮಾರ್ಗಗಳನ್ನು ಡಿ.1ರವರೆಗೆ ಬದಲಾವಣೆ ಮಾಡಲಾಗಿದೆ.</p>.<p>ನವಂಬರ್ ತಿಂಗಳಲ್ಲಿ ಕಾರ್ತಿಕ ಮಾಸದ ಕೊನೆ ಸೋಮವಾರ ಕಡಲೆಕಾಯಿ ಪರಿಷೆ ಆಚರಿಸಲಾಗುತ್ತದೆ. ಪರಂಪರಾನುಗತವಾಗಿ ನಡೆಯುತ್ತಾ ಬಂದಿರುವ ಈ ಪರಿಷೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>