<p><strong>ನೆಲಮಂಗಲ:</strong> ಪಟ್ಟಣದ ಸೊಂಡೆಕೊಪ್ಪ ರಸ್ತೆಯಲ್ಲಿರುವ ಬಯಲು ಉದ್ಭವ ಗಣಪತಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಮಾಗಡಿ, ರಾಮನಗರ, ದೊಡ್ಡಬಳ್ಳಾಪುರ, ಬೆಂಗಳೂರಿನ ಭಕ್ತರು ಪರಿಷೆಯಲ್ಲಿ ಭಾಗವಹಿಸಿದ್ದರು. ಶನಿವಾರ ರಾತ್ರಿ ಕಲ್ಯಾಣೋತ್ಸವ ನಡೆಯಿತು.</p>.<p>ಭಾನುವಾರ ಮಧ್ಯಾಹ್ನ ತೇರು ಎಳೆಯುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಸೂರು ಬಾಳೆಹಣ್ಣು ಎಸೆದು ಭಕ್ತಿ ಮೆರೆದರು.</p>.<p>ಶುಕ್ರವಾರದಿಂದಲೇ ಸೊಂಡೆಕೊಪ್ಪ ರಸ್ತೆಯ ಇಕ್ಕೆಲಗಳಲ್ಲಿ ಅಂಗಡಿಗಳನ್ನು ತೆರೆಯಲಾಗಿತ್ತು. ಮಕ್ಕಳು ವಿವಿಧ ಮನರಂಜನಾತ್ಮಕ ಕ್ರೀಡೆಗಳನ್ನು ಆಡಿ ಸಂಭ್ರಮಿಸಿದರು. </p>.<p>ಶನಿವಾರದಿಂದಲೇ ದೇವಸ್ಥಾನ ಟ್ರಸ್ಟ್ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಊಟೋಪಚಾರ ವ್ಯವಸ್ಥೆ ಮಾಡಿದ್ದರು. 10 ಸಾವಿರಕ್ಕೂ ಹೆಚ್ಚು ಭಕ್ತರು ದಾಸೋಹ ಸ್ವೀಕರಿಸಿದರು. ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳು ಅಲ್ಲಲ್ಲಿ ಅರವಂಟಿಗೆಗಳನ್ನು ನಿರ್ಮಿಸಿಕೊಂಡು ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಪಟ್ಟಣದ ಸೊಂಡೆಕೊಪ್ಪ ರಸ್ತೆಯಲ್ಲಿರುವ ಬಯಲು ಉದ್ಭವ ಗಣಪತಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಮಾಗಡಿ, ರಾಮನಗರ, ದೊಡ್ಡಬಳ್ಳಾಪುರ, ಬೆಂಗಳೂರಿನ ಭಕ್ತರು ಪರಿಷೆಯಲ್ಲಿ ಭಾಗವಹಿಸಿದ್ದರು. ಶನಿವಾರ ರಾತ್ರಿ ಕಲ್ಯಾಣೋತ್ಸವ ನಡೆಯಿತು.</p>.<p>ಭಾನುವಾರ ಮಧ್ಯಾಹ್ನ ತೇರು ಎಳೆಯುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಸೂರು ಬಾಳೆಹಣ್ಣು ಎಸೆದು ಭಕ್ತಿ ಮೆರೆದರು.</p>.<p>ಶುಕ್ರವಾರದಿಂದಲೇ ಸೊಂಡೆಕೊಪ್ಪ ರಸ್ತೆಯ ಇಕ್ಕೆಲಗಳಲ್ಲಿ ಅಂಗಡಿಗಳನ್ನು ತೆರೆಯಲಾಗಿತ್ತು. ಮಕ್ಕಳು ವಿವಿಧ ಮನರಂಜನಾತ್ಮಕ ಕ್ರೀಡೆಗಳನ್ನು ಆಡಿ ಸಂಭ್ರಮಿಸಿದರು. </p>.<p>ಶನಿವಾರದಿಂದಲೇ ದೇವಸ್ಥಾನ ಟ್ರಸ್ಟ್ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಊಟೋಪಚಾರ ವ್ಯವಸ್ಥೆ ಮಾಡಿದ್ದರು. 10 ಸಾವಿರಕ್ಕೂ ಹೆಚ್ಚು ಭಕ್ತರು ದಾಸೋಹ ಸ್ವೀಕರಿಸಿದರು. ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳು ಅಲ್ಲಲ್ಲಿ ಅರವಂಟಿಗೆಗಳನ್ನು ನಿರ್ಮಿಸಿಕೊಂಡು ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>