‘ಮಲ್ಲೇಶ್ವರ 8ನೇ ಕ್ರಾಸ್ನಿಂದ 16ನೇ ಕ್ರಾಸ್ವರೆಗೂ ರೈತರು ತಾವು ಬೆಳೆದ ಕಡಲೆಕಾಯಿ, ಅವರೆಕಾಯಿ ಮಾರಾಟ ಮಾಡಲು, ಮಂಡ್ಯ ರೈತರಿಗೆ ಬೆಲ್ಲದ ಅಂಗಡಿ ತೆರೆಯಲು, ಎಲ್ಲಾ ಕೃಷಿ ಉತ್ಪನಗಳು ಸೇರಿ ವಿವಿಧ ಉತ್ಪನ್ನಗಳನ್ನು ಮಾರಾಟಕ್ಕೆ ಮಾಡಲು ಅವಕಾಶವಿದೆ. ಕಾಡು ಮಲ್ಲೇಶ್ವರದ ದೇವಸ್ಥಾನದಲ್ಲಿ ಕಡಲೆಕಾಯಿಯಿಂದ ಅಲಂಕಾರ ಮಾಡಲಾಗುತ್ತಿದೆ. ಈ ಬಾರಿ ಪರಿಷೆಯಲ್ಲಿ ದೇಶೀಯ ಗೂಳಿಗಳು ಆಕರ್ಷಿಸಲಿವೆ. ಆಂಧ್ರಪ್ರದೇಶದ ಓಂಗೋಲ್ನಿಂದ ಎರಡು ದೇಶೀಯ ಗೂಳಿಗಳನ್ನು ತರಲಾಗಿದೆ. ಈ ಗೂಳಿಗಳನ್ನು ಕಾಡು ಮಲ್ಲೇಶ್ವರದಲ್ಲಿ ಸಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ’ ಎಂದರು.