ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂಗಿ ಆತ್ಮಹತ್ಯೆಗೆ ಕಾರಣವೆಂದು ಬಾವವನ್ನೇ ಕೊಂದ’

ಕಾಡುಗೋಡಿ ಪೊಲೀಸರಿಂದ ಸೈನಿಕ ಬಂಧನ
Last Updated 21 ಸೆಪ್ಟೆಂಬರ್ 2020, 5:30 IST
ಅಕ್ಷರ ಗಾತ್ರ

ಬೆಂಗಳೂರು: ಕಾಡುಗೋಡಿ ವೀರಸ್ವಾಮಿ ಲೇಔಟ್‌ನಲ್ಲಿ ರಾಜೇಶ್ (35) ಎಂಬುವರನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಜಾನ್‌ಪಾಲ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ಸೈನಿಕನಾದಆರೋಪಿ ಜಾನ್‌ಪಾಲ್, ಭಾನುವಾರ ಬೆಳಿಗ್ಗೆ 11.30ರ ಸುಮಾರಿಗೆ ಸ್ನೇಹಿತನ ಜೊತೆ ರಾಜೇಶ್ ಮನೆಗೆ ಬಂದು ಕತ್ತು ಕೊಯ್ದು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವವಾಗಿ ರಾಜೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಸದ್ಯ ಜಾನ್‌ಪಾಲ್‌ ಅವರನ್ನು ಬಂಧಿಸಲಾಗಿದ್ದು, ಸ್ನೇಹಿತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೆಜಿಎಫ್‌ನ ರಾಜೇಶ್, ಎಚ್‌ಎಎಲ್ ಉದ್ಯೋಗಿ. ಏಳು ವರ್ಷಗಳ ಹಿಂದೆ ಜಾನ್‌ಪಾಲ್‌ ಅವರ ತಂಗಿ ಜಾಸ್ಮಿನ್ ಅವರನ್ನು ರಾಜೇಶ್ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಜಾಸ್ಮಿನ್ ಇತ್ತೀಚೆಗೆ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.’

‘ಪತಿ ರಾಜೇಶ್ ಕಿರುಕುಳದಿಂದ ಜಾಸ್ಮಿನ್ ಮೃತಪಟ್ಟಿರುವುದಾಗಿ ಠಾಣೆಗೆ ಪೋಷಕರು ದೂರು ನೀಡಿದ್ದರು. ಇತ್ತೀಚೆಗೆ ರಜೆ ಮೇಲೆ ಊರಿಗೆ ಬಂದಿದ್ದ ಜಾನ್‌ಪಾಲ್, ತಮ್ಮ ತಂಗಿ ಆತ್ಮಹತ್ಯೆಗೆ ರಾಜೇಶ್ ಕಾರಣವೆಂದು ತಿಳಿದು ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT