‘ಪರಿಶಿಷ್ಟ ಪಂಗಡದ ಶ್ರೀನಿವಾಸ್ ಹಾಗೂ ಕುಟುಂಬದವರಿಗೆ, ಸ್ಥಳೀಯ ಕೆಲ ಸಮುದಾಯದ ಜನರು ಕಿರುಕುಳ ನೀಡುತ್ತಿದ್ದರು. ಸಣ್ಣ ವಿಷಯಕ್ಕೂ ಜಗಳ ತೆಗೆದು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು’ ಎಂಬುದಾಗಿ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ಜೊತೆಗೆ, ತಮ್ಮ ವಿರುದ್ಧವೇ ಸ್ಥಳೀಯರು ಠಾಣೆಗೆ ದೂರು ನೀಡಿದ್ದರೆಂದು ಶ್ರೀನಿವಾಸ್ ಹೇಳಿದ್ದಾರೆ. ಈ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.