‘ಸಮುದಾಯದ ಜನ ಶಿಕ್ಷಣ, ವಸತಿ, ಉದ್ಯೋಗವಕಾಶಗಳಿಂದ ವಂಚಿತರಾಗಿದ್ದಾರೆ. ಜನರ ಜೀವನದ ವಾಸ್ತವತೆಯನ್ನು ತೋರಿಸುವ ಸಲುವಾಗಿಯೇ ಸಾಕ್ಷ್ಯಚಿತ್ರ ನಿರ್ಮಿಸಲಾಗಿದೆ. ಚಿತ್ರದುರ್ಗ, ತುಮಕೂರು, ಪಾವಗಡ, ಶಿರಾ, ಕೂಡ್ಲಿಗಿ, ಕೊರಟಗೆರೆಯಲ್ಲಿ ಹೆಚ್ಚಾಗಿ ವಾಸಿಸುವ ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಪ್ರಯತ್ನಿಸಬೇಕು’ ಎಂದು ತಿಳಿಸಿದರು. ಮುಖಂಡರಾದ ಉಮಾಪತಿ, ಮಹಲಿಂಗಪ್ಪ, ದೇವರಾಜು, ಬಸವರಾಜ್, ತಿಮ್ಮಯ್ಯ, ಗುರುಲಿಂಗಯ್ಯ, ಸಿದ್ದೇಶ್, ಮುರಳಿ, ದೊಡ್ಡಪ್ಪ, ವಿಶ್ವನಾಥ, ರಂಗಸ್ವಾಮಿ, ಪೂಜಾರಪ್ಪ ಇದ್ದರು.