<p><strong>ಹೆಸರಘಟ್ಟ: </strong>ಐವತ್ತಾರು ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತ ಪಟ್ಟ ಹಿನ್ನೆಲೆಯಲ್ಲಿ ಕಾಕೋಳು ಗ್ರಾಮವನ್ನು ಸೀಲ್ಡೌನ್ ಮಾಡಲಾಯಿತು.</p>.<p>ಎರಡು ದಿನಗಳಿಂದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು ತಿಳಿಸಿದರು.</p>.<p>ಗ್ರಾಮದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು ಹನ್ನೊಂದು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p><strong>ಸೀಲ್ಡೌನ್ ನಡುವೆ ಮದ್ಯ ಮಾರಾಟ:</strong>ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದ್ದರೂ, ಗ್ರಾಮದಲ್ಲಿ ಮದ್ಯ ಮಾರಾಟ ನಿರಾತಂಕವಾಗಿ ಸಾಗಿತ್ತು. ಈ ಕುರಿತು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.</p>.<p><strong>ಪೊಲೀಸ್ ಸಿಬ್ಬಂದಿಗೆ ಸೋಂಕಿಲ್ಲ:</strong>ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಹೊಯ್ಸಳ ಚಾಲಕನಿಗೆ ಕೊರೊನಾ ಸೋಂಕು ದೃಡ ಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಸಿಬ್ಬಂದಿಗೆ ಸೋಂಕು ಹರಡಿಲ್ಲ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಜಯರಾಮ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ಐವತ್ತಾರು ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತ ಪಟ್ಟ ಹಿನ್ನೆಲೆಯಲ್ಲಿ ಕಾಕೋಳು ಗ್ರಾಮವನ್ನು ಸೀಲ್ಡೌನ್ ಮಾಡಲಾಯಿತು.</p>.<p>ಎರಡು ದಿನಗಳಿಂದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು ತಿಳಿಸಿದರು.</p>.<p>ಗ್ರಾಮದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು ಹನ್ನೊಂದು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p><strong>ಸೀಲ್ಡೌನ್ ನಡುವೆ ಮದ್ಯ ಮಾರಾಟ:</strong>ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದ್ದರೂ, ಗ್ರಾಮದಲ್ಲಿ ಮದ್ಯ ಮಾರಾಟ ನಿರಾತಂಕವಾಗಿ ಸಾಗಿತ್ತು. ಈ ಕುರಿತು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.</p>.<p><strong>ಪೊಲೀಸ್ ಸಿಬ್ಬಂದಿಗೆ ಸೋಂಕಿಲ್ಲ:</strong>ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಹೊಯ್ಸಳ ಚಾಲಕನಿಗೆ ಕೊರೊನಾ ಸೋಂಕು ದೃಡ ಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಸಿಬ್ಬಂದಿಗೆ ಸೋಂಕು ಹರಡಿಲ್ಲ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಜಯರಾಮ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>