ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ನಗರದಲ್ಲಿ ಮಂಗಳವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮೂರು ದಿನಗಳ ‘ಗಿರೀಶ್ ಕಾರ್ನಾಡ್ ನೆನಪಿನ ನಾಟಕೋತ್ಸವ’ಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಸಮಾಜದ ವಸ್ತುಗಳನ್ನೇ ಆಯ್ಕೆ ಮಾಡಿಕೊಂಡು ನಾಟಕಗಳನ್ನು ಪ್ರದರ್ಶಿಸಬೇಕು. ಅದೇ ರಾಮಾಯಣ, ಮಹಾಭಾರತವನ್ನು ಹೇಳಲು ಸಾಧ್ಯವಿಲ್ಲ. ಹೊಸದನ್ನು ಕಟ್ಟಿಕೊಡಬೇಕು. ನಾಟಕಗಳ ಮೂಲಕ ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಬೇಕು’ ಎಂದು ಹೇಳಿದರು.