<p>ಬೆಂಗಳೂರು: ಕಲಾಸಿಪಾಳ್ಯ ಮಾರುಕಟ್ಟೆ ಪಾದಚಾರಿ ಮಾರ್ಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸುವ ವೇಳೆ ನಡೆದಿದ್ದ ಗಲಾಟೆ ಸಂಬಂಧ ದೂರು–ಪ್ರತಿ ದೂರು ದಾಖಲಾಗಿದೆ.</p>.<p>‘ಸ್ಥಳೀಯ ವ್ಯಾಪಾರಿಗಳು ನೀಡಿರುವ ದೂರು ಆಧರಿಸಿ ಕಾರ್ಪೊರೇಟರ್ ಪ್ರತಿಭಾ ಅವರ ಪತಿ ಧನರಾಜ್, ಮಗ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಧನರಾಜ್ ಸಹ ಪ್ರತಿ ದೂರು ನೀಡಿದ್ದಾರೆ. ಸ್ಥಳೀಯ ವ್ಯಾಪಾರಿಗಳಾದ ಸೆಂಥಿಲ್, ಮೊಹಮ್ಮದ್, ಪ್ರಕಾಶ್ ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.</p>.<p>‘ಲಾಕ್ಡೌನ್ ಹಾಗೂ ನಿಷೇಧಾಜ್ಞೆ ವೇಳೆಯಲ್ಲೂ ಗುಂಪು ಸೇರಿದ ಆರೋಪದಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದರು.</p>.<p class="Subhead">ಸಗಣಿ ಎರಚಿದ್ದರು: ‘ಪಾದಚಾರಿ ಮಾರ್ಗದ ಅಂಗಡಿಗಳನ್ನು ತೆರವುಗೊಳಿಸಲು ಧನರಾಜ್ ಹಾಗೂ ಇತರರು ಬಿಬಿಎಂಪಿ ಅಧಿಕಾರಿಗಳ ಜೊತೆ ಹೋಗಿದ್ದ ವೇಳೆಯಲ್ಲಿ ಗಲಾಟೆ ನಡೆದಿತ್ತು. ಪ್ರತಿಭಟನೆ ನಡೆಸಿದ್ದ ಸ್ಥಳೀಯ ವ್ಯಾಪಾರಿಗಳು ಸಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹಫ್ತಾ ನೀಡುವಂತೆ ಕಾರ್ಪೊರೇಟರ್ ಪತಿ ಪೀಡಿಸುತ್ತಿದ್ದರು. ಹಣ ಕೊಡದಿದ್ದಕ್ಕೆ ಅಂಗಡಿ ತೆರವು ಮಾಡಲು ಬಂದಿದ್ದರೆಂದು ವ್ಯಾಪಾರಿಗಳು ಆರೋಪಿಸಿದ್ದರು. ಈಗ ಎರಡೂ ಕಡೆಯವರು ದೂರು ನೀಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಲಾಸಿಪಾಳ್ಯ ಮಾರುಕಟ್ಟೆ ಪಾದಚಾರಿ ಮಾರ್ಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸುವ ವೇಳೆ ನಡೆದಿದ್ದ ಗಲಾಟೆ ಸಂಬಂಧ ದೂರು–ಪ್ರತಿ ದೂರು ದಾಖಲಾಗಿದೆ.</p>.<p>‘ಸ್ಥಳೀಯ ವ್ಯಾಪಾರಿಗಳು ನೀಡಿರುವ ದೂರು ಆಧರಿಸಿ ಕಾರ್ಪೊರೇಟರ್ ಪ್ರತಿಭಾ ಅವರ ಪತಿ ಧನರಾಜ್, ಮಗ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಧನರಾಜ್ ಸಹ ಪ್ರತಿ ದೂರು ನೀಡಿದ್ದಾರೆ. ಸ್ಥಳೀಯ ವ್ಯಾಪಾರಿಗಳಾದ ಸೆಂಥಿಲ್, ಮೊಹಮ್ಮದ್, ಪ್ರಕಾಶ್ ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.</p>.<p>‘ಲಾಕ್ಡೌನ್ ಹಾಗೂ ನಿಷೇಧಾಜ್ಞೆ ವೇಳೆಯಲ್ಲೂ ಗುಂಪು ಸೇರಿದ ಆರೋಪದಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದರು.</p>.<p class="Subhead">ಸಗಣಿ ಎರಚಿದ್ದರು: ‘ಪಾದಚಾರಿ ಮಾರ್ಗದ ಅಂಗಡಿಗಳನ್ನು ತೆರವುಗೊಳಿಸಲು ಧನರಾಜ್ ಹಾಗೂ ಇತರರು ಬಿಬಿಎಂಪಿ ಅಧಿಕಾರಿಗಳ ಜೊತೆ ಹೋಗಿದ್ದ ವೇಳೆಯಲ್ಲಿ ಗಲಾಟೆ ನಡೆದಿತ್ತು. ಪ್ರತಿಭಟನೆ ನಡೆಸಿದ್ದ ಸ್ಥಳೀಯ ವ್ಯಾಪಾರಿಗಳು ಸಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಹಫ್ತಾ ನೀಡುವಂತೆ ಕಾರ್ಪೊರೇಟರ್ ಪತಿ ಪೀಡಿಸುತ್ತಿದ್ದರು. ಹಣ ಕೊಡದಿದ್ದಕ್ಕೆ ಅಂಗಡಿ ತೆರವು ಮಾಡಲು ಬಂದಿದ್ದರೆಂದು ವ್ಯಾಪಾರಿಗಳು ಆರೋಪಿಸಿದ್ದರು. ಈಗ ಎರಡೂ ಕಡೆಯವರು ದೂರು ನೀಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>