<p><strong>ಬೆಂಗಳೂರು:</strong> ಕಲಾಸಿಪಾಳ್ಯ ಹೊಸ ಬಡಾವಣೆಯ 2ನೇ ಅಡ್ಡರಸ್ತೆಯಲ್ಲಿ ವಿಷಕಾರಿ ತ್ಯಾಜ್ಯ ಎಸೆಯಲಾಗಿದ್ದು, ಆ ಸಂಬಂಧ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಿಷಕಾರಿ ತ್ಯಾಜ್ಯ ಎಸೆದಿದ್ದಾರೆ ಎನ್ನಲಾದ ಅಲೆಪ್ಪ ಪಾರ್ಸೆಲ್ ಸರ್ವೀಸಸ್ನ ಮಾಲೀಕರ ವಿರುದ್ಧ ಬಿಬಿಎಂಪಿಯ ಕಿರಿಯ ಆರೋಗ್ಯ ಪರಿವೀಕ್ಷಕ ವೀರಯ್ಯ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಅಲೆಪ್ಪ ಪಾರ್ಸೆಲ್ ಸರ್ವೀಸಸ್ನವರು ವಿಷಕಾರಿ ತ್ಯಾಜ್ಯವಾದ ಅವಧಿ ಮೀರಿದ ಔಷಧಿಗಳನ್ನು ರಸ್ತೆಯಲ್ಲೇ ಎಸೆದು ಹೋಗಿದ್ದಾರೆ. ಈ ತ್ಯಾಜ್ಯ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ’ ಎಂದು ವೀರಯ್ಯ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ತ್ಯಾಜ್ಯ ಎಸೆದ ಬಗ್ಗೆ ನೋಟಿಸ್ ನೀಡಲು ಅಲೆಪ್ಪ ಪಾರ್ಸೆಲ್ ಸರ್ವೀಸಸ್ ಕಚೇರಿಗೆ ಹೋದಾಗ ಮಾಲೀಕರು ಉಡಾಫೆಯಿಂದ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲಾಸಿಪಾಳ್ಯ ಹೊಸ ಬಡಾವಣೆಯ 2ನೇ ಅಡ್ಡರಸ್ತೆಯಲ್ಲಿ ವಿಷಕಾರಿ ತ್ಯಾಜ್ಯ ಎಸೆಯಲಾಗಿದ್ದು, ಆ ಸಂಬಂಧ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಿಷಕಾರಿ ತ್ಯಾಜ್ಯ ಎಸೆದಿದ್ದಾರೆ ಎನ್ನಲಾದ ಅಲೆಪ್ಪ ಪಾರ್ಸೆಲ್ ಸರ್ವೀಸಸ್ನ ಮಾಲೀಕರ ವಿರುದ್ಧ ಬಿಬಿಎಂಪಿಯ ಕಿರಿಯ ಆರೋಗ್ಯ ಪರಿವೀಕ್ಷಕ ವೀರಯ್ಯ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಅಲೆಪ್ಪ ಪಾರ್ಸೆಲ್ ಸರ್ವೀಸಸ್ನವರು ವಿಷಕಾರಿ ತ್ಯಾಜ್ಯವಾದ ಅವಧಿ ಮೀರಿದ ಔಷಧಿಗಳನ್ನು ರಸ್ತೆಯಲ್ಲೇ ಎಸೆದು ಹೋಗಿದ್ದಾರೆ. ಈ ತ್ಯಾಜ್ಯ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ’ ಎಂದು ವೀರಯ್ಯ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ತ್ಯಾಜ್ಯ ಎಸೆದ ಬಗ್ಗೆ ನೋಟಿಸ್ ನೀಡಲು ಅಲೆಪ್ಪ ಪಾರ್ಸೆಲ್ ಸರ್ವೀಸಸ್ ಕಚೇರಿಗೆ ಹೋದಾಗ ಮಾಲೀಕರು ಉಡಾಫೆಯಿಂದ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>