‘ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಬಲಮ್ ಸ್ಟ್ರೀಟ್ ನಿವಾಸಿ ಮುತ್ತು ಹಮದ್ ಮೀರಾ (51) ಬಂಧಿತ ಆರೋಪಿ. ಆತನ ಬಳಿ ಇದ್ದ ಆಮೆಗಳ ಪೈಕಿ 21 ಮೃತಪಟ್ಟಿದ್ದು, 20 ಆಮೆಗಳ ಸ್ಥಿತಿ ಗಂಭೀರವಾಗಿದೆ. ಉಳಿದ 360 ಆಮೆಗಳನ್ನು ರಕ್ಷಿಸಲಾಗಿದೆ. ಬನ್ನೇರುಘಟ್ಟ ಜೈವಿನ ಉದ್ಯಾನದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅವರಿಗೆಆಮೆಗಳನ್ನು ಒಪ್ಪಿಸಲಾಗುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.