<p><strong>ಬೆಂಗಳೂರು:</strong> ನಗರದ ರೌಡಿ ಕಾಡುಬಿಸನಹಳ್ಳಿ ಸೋಮು ಹತ್ಯೆಗೆ ನಾಡ ಪಿಸ್ತೂಲ್ ಹಾಗೂ ಮಾರಕಾಸ್ತ್ರ ನೀಡಿದ್ದ ಆರೋಪದಡಿ ಕಲಬುರ್ಗಿ ರೌಡಿ ಸತೀಶ್ ಅಲಿಯಾಸ್ ಮಾರ್ಕೆಟ್ ಸತೀಶ್ನನ್ನು (38) ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ರೌಡಿಗಳಾದ ಸೋಮು ಹಾಗೂ ರೋಹಿತ್ ಗೌಡ ನಡುವೆ ಹಲವು ವರ್ಷಗಳಿಂದ ವೈಷಮ್ಯ ಇತ್ತು. ಸೋಮು ಹತ್ಯೆ ಮಾಡಲು ರೋಹಿತ್ ಸಂಚು ರೂಪಿಸಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು, ರೋಹಿತ್ ಹಾಗೂ ಆತನ ಸಹಚರರನ್ನು ಬಂಧಿಸಿದ್ದರು.</p>.<p>ನಾಡ ಪಿಸ್ತೂಲ್, ಜೀವಂತ ಗುಂಡು, 10 ಮಚ್ಚುಗಳು ಹಾಗೂ 2 ಕಾರುಗಳನ್ನು ಜಪ್ತಿ ಮಾಡಿದ್ದರು.</p>.<p>‘ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಮಾರ್ಕೆಟ್ ಸತೀಶ್ನ ಹೆಸರು ಬಾಯ್ಬಿಟ್ಟಿದ್ದರು. ಆತನನ್ನು ಇದೀಗ ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಆತನ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.</p>.<p class="Subhead"><strong>₹ 1 ಲಕ್ಷಕ್ಕೆ ಮಾರಾಟ:</strong> ‘ಉತ್ತರ ಪ್ರದೇಶ, ಮಧ್ಯ ಪ್ರದೇಶ ಹಾಗೂ ಬಿಹಾರದ ಶಸ್ತ್ರಾಸ್ತ್ರ ಮಾರಾಟಗಾರರ ಜೊತೆ ರೌಡಿ ಸತೀಶ್ ಸಂಪರ್ಕವಿಟ್ಟುಕೊಂಡಿದ್ದ. ಅವರಿಂದ ₹ 10 ಸಾವಿರದಿಂದ ₹ 15 ಸಾವಿರಕ್ಕೆ ನಾಡ ಪಿಸ್ತೂಲ್ ಖರೀದಿಸಿ, ರಾಜ್ಯದಲ್ಲಿ ₹ 80 ಸಾವಿರದಿಂದ ₹ 1 ಲಕ್ಷಕ್ಕೆ ಮಾರುತ್ತಿದ್ದ’ ಎಂದೂ ಅಧಿಕಾರಿ ತಿಳಿಸಿದರು.</p>.<p>‘ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ ಆರೋಪಿ, ಇತ್ತೀಚಿನ ದಿನಗಳಲ್ಲಿ ಶಸ್ತ್ರಾಸ್ತ್ರ ಮಾರಾಟದಲ್ಲಿ ನಿರತನಾಗಿದ್ದ. ಅದರಿಂದಲೇ ಕೋಟ್ಯಂತರ ರೂಪಾಯಿ ಗಳಿಸಿರುವ ಮಾಹಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ರೌಡಿ ಕಾಡುಬಿಸನಹಳ್ಳಿ ಸೋಮು ಹತ್ಯೆಗೆ ನಾಡ ಪಿಸ್ತೂಲ್ ಹಾಗೂ ಮಾರಕಾಸ್ತ್ರ ನೀಡಿದ್ದ ಆರೋಪದಡಿ ಕಲಬುರ್ಗಿ ರೌಡಿ ಸತೀಶ್ ಅಲಿಯಾಸ್ ಮಾರ್ಕೆಟ್ ಸತೀಶ್ನನ್ನು (38) ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ರೌಡಿಗಳಾದ ಸೋಮು ಹಾಗೂ ರೋಹಿತ್ ಗೌಡ ನಡುವೆ ಹಲವು ವರ್ಷಗಳಿಂದ ವೈಷಮ್ಯ ಇತ್ತು. ಸೋಮು ಹತ್ಯೆ ಮಾಡಲು ರೋಹಿತ್ ಸಂಚು ರೂಪಿಸಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು, ರೋಹಿತ್ ಹಾಗೂ ಆತನ ಸಹಚರರನ್ನು ಬಂಧಿಸಿದ್ದರು.</p>.<p>ನಾಡ ಪಿಸ್ತೂಲ್, ಜೀವಂತ ಗುಂಡು, 10 ಮಚ್ಚುಗಳು ಹಾಗೂ 2 ಕಾರುಗಳನ್ನು ಜಪ್ತಿ ಮಾಡಿದ್ದರು.</p>.<p>‘ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಮಾರ್ಕೆಟ್ ಸತೀಶ್ನ ಹೆಸರು ಬಾಯ್ಬಿಟ್ಟಿದ್ದರು. ಆತನನ್ನು ಇದೀಗ ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಆತನ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.</p>.<p class="Subhead"><strong>₹ 1 ಲಕ್ಷಕ್ಕೆ ಮಾರಾಟ:</strong> ‘ಉತ್ತರ ಪ್ರದೇಶ, ಮಧ್ಯ ಪ್ರದೇಶ ಹಾಗೂ ಬಿಹಾರದ ಶಸ್ತ್ರಾಸ್ತ್ರ ಮಾರಾಟಗಾರರ ಜೊತೆ ರೌಡಿ ಸತೀಶ್ ಸಂಪರ್ಕವಿಟ್ಟುಕೊಂಡಿದ್ದ. ಅವರಿಂದ ₹ 10 ಸಾವಿರದಿಂದ ₹ 15 ಸಾವಿರಕ್ಕೆ ನಾಡ ಪಿಸ್ತೂಲ್ ಖರೀದಿಸಿ, ರಾಜ್ಯದಲ್ಲಿ ₹ 80 ಸಾವಿರದಿಂದ ₹ 1 ಲಕ್ಷಕ್ಕೆ ಮಾರುತ್ತಿದ್ದ’ ಎಂದೂ ಅಧಿಕಾರಿ ತಿಳಿಸಿದರು.</p>.<p>‘ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ ಆರೋಪಿ, ಇತ್ತೀಚಿನ ದಿನಗಳಲ್ಲಿ ಶಸ್ತ್ರಾಸ್ತ್ರ ಮಾರಾಟದಲ್ಲಿ ನಿರತನಾಗಿದ್ದ. ಅದರಿಂದಲೇ ಕೋಟ್ಯಂತರ ರೂಪಾಯಿ ಗಳಿಸಿರುವ ಮಾಹಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>