ಸಂಸ್ಥೆಯು ಪ್ರತಿ ವರ್ಷ ಯಕ್ಷಗಾನ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂಬೆಳ್ಳಿತಟ್ಟೆಯನ್ನು ಒಳಗೊಂಡಿದೆ.ಡಿ.25ರ ಸಂಜೆ 5 ಗಂಟೆಗೆ ಬೆಂಗಳೂರಿನ ಗವಿಪುರದಲ್ಲಿರುವ ಉದಯಭಾನು ಕಲಾಸಂಘದ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದುಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.