<p><strong>ಬೆಂಗಳೂರು:</strong> ವಿವಿಧ ರಾಜ್ಯಗಳಲ್ಲಿ ವಾಹನಗಳನ್ನು ಕದ್ದು ಬಳಿಕ ಅವುಗಳ ದಾಖಲೆ ತಿರುಚಿ ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಕಳ್ಳರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.</p>.<p>‘ಭಾಸ್ಕರ್, ಶಾಹೀದ್, ಇದಾಯತ್ ಹಾಗೂ ಇರ್ಫಾನ್ ಯಾನೆ ನಿಹಾಲ್ ಬಂಧಿತರು. ಇವರಿಂದ ₹1.05 ಕೋಟಿ ಮೌಲ್ಯದ 9 ಮಿನಿ ಲಾರಿಗಳು ಹಾಗೂ ಹುಂಡೈ ಕ್ರೆಡಾಯ್ ಕಾರನ್ನು ಜಪ್ತಿ ಮಾಡಲಾಗಿದೆ.ಶಾಹೀದ್ ಮತ್ತು ಇದಾಯತ್ ಹಾಸನ ಜೈಲಿನಲ್ಲಿದ್ದುಕೊಂಡೆ ಕೃತ್ಯಕ್ಕೆ ಸಹಕರಿಸುತ್ತಿದ್ದರು. ಅವರ ವಿಚಾರಣೆ ನಡೆಸಿ ಮತ್ತೆ ಜೈಲಿಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಕಂಪನಿಯೊಂದಕ್ಕೆ ಸೇರಿದ್ದ ಅಶೋಕ ಲೇಲ್ಯಾಂಡ್ ಲಾರಿಯನ್ನು ಕಂಪನಿಯ ನಿಲುಗಡೆ ಸ್ಥಳದಿಂದಲೇ ಕದ್ದೊಯ್ಯಲಾಗಿತ್ತು. ಈ ಸಂಬಂಧ ಜುಲೈ 10ರಂದು ದಾಖಲಾಗಿದ್ದ ದೂರನ್ನು ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಮಂಗಳೂರಿನಲ್ಲಿ ಲಾರಿಯನ್ನು ಪತ್ತೆ ಮಾಡಿದ್ದರು. ಆರೋಪಿಯೊಬ್ಬನನ್ನು ವಿಚಾರಿಸಿದಾಗ ಆತ ಇತರ ಮೂವರ ಹೆಸರು ಬಾಯಿ ಬಿಟ್ಟಿದ್ದ’ ಎಂದರು.</p>.<p>‘ನಿಹಾಲ್ ಅಂತರರಾಜ್ಯ ವಾಹನ ಕಳ್ಳ. ತನ್ನ ಸಹಚರರ ಮೂಲಕ ವಾಹನಗಳನ್ನು ಕಳವು ಮಾಡಿಸುತ್ತಿದ್ದ ಆತ ಅವುಗಳ ದಾಖಲೆಗಳನ್ನು ತಿರುಚುತ್ತಿದ್ದ. ವಾಹನಗಳ ರೂಪವನ್ನೇ ಬದಲಿಸಿ ಇತರರಿಗೆ ಮಾರಾಟ ಮಾಡುತ್ತಿದ್ದ. ಹತ್ತು ವರ್ಷಗಳ ಹಿಂದೆ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಈತ ಬಳಿಕ ತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಕೊಲೆ ಪ್ರಕರಣವೂ ಈತನ ಮೇಲಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕಾಮಾಕ್ಷಿಪಾಳ್ಯ, ಜಿಗಣಿ, ಮಾಗಡಿ, ಹಿರಿಸಾವೆ, ಸವಣೂರು, ಶಿಕಾರಿಪುರ, ಹಾಸನ ನಗರ, ಹಳೆಬೀಡು, ರಾಣೆಬೆನ್ನೂರು ಠಾಣೆ ವ್ಯಾಪ್ತಿಯಲ್ಲಿ ಲಾರಿಗಳನ್ನು ಕದ್ದಿರುವುದು ವಿಚಾರಣೆಯಿಂದ ಗೊತ್ತಾಗಿದೆ. ಹುಂಡೈ ಕಾರನ್ನು ನವದೆಹಲಿಯಿಂದ ಕದ್ದು ತಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ರಾಜ್ಯಗಳಲ್ಲಿ ವಾಹನಗಳನ್ನು ಕದ್ದು ಬಳಿಕ ಅವುಗಳ ದಾಖಲೆ ತಿರುಚಿ ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಕಳ್ಳರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.</p>.<p>‘ಭಾಸ್ಕರ್, ಶಾಹೀದ್, ಇದಾಯತ್ ಹಾಗೂ ಇರ್ಫಾನ್ ಯಾನೆ ನಿಹಾಲ್ ಬಂಧಿತರು. ಇವರಿಂದ ₹1.05 ಕೋಟಿ ಮೌಲ್ಯದ 9 ಮಿನಿ ಲಾರಿಗಳು ಹಾಗೂ ಹುಂಡೈ ಕ್ರೆಡಾಯ್ ಕಾರನ್ನು ಜಪ್ತಿ ಮಾಡಲಾಗಿದೆ.ಶಾಹೀದ್ ಮತ್ತು ಇದಾಯತ್ ಹಾಸನ ಜೈಲಿನಲ್ಲಿದ್ದುಕೊಂಡೆ ಕೃತ್ಯಕ್ಕೆ ಸಹಕರಿಸುತ್ತಿದ್ದರು. ಅವರ ವಿಚಾರಣೆ ನಡೆಸಿ ಮತ್ತೆ ಜೈಲಿಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಕಂಪನಿಯೊಂದಕ್ಕೆ ಸೇರಿದ್ದ ಅಶೋಕ ಲೇಲ್ಯಾಂಡ್ ಲಾರಿಯನ್ನು ಕಂಪನಿಯ ನಿಲುಗಡೆ ಸ್ಥಳದಿಂದಲೇ ಕದ್ದೊಯ್ಯಲಾಗಿತ್ತು. ಈ ಸಂಬಂಧ ಜುಲೈ 10ರಂದು ದಾಖಲಾಗಿದ್ದ ದೂರನ್ನು ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಮಂಗಳೂರಿನಲ್ಲಿ ಲಾರಿಯನ್ನು ಪತ್ತೆ ಮಾಡಿದ್ದರು. ಆರೋಪಿಯೊಬ್ಬನನ್ನು ವಿಚಾರಿಸಿದಾಗ ಆತ ಇತರ ಮೂವರ ಹೆಸರು ಬಾಯಿ ಬಿಟ್ಟಿದ್ದ’ ಎಂದರು.</p>.<p>‘ನಿಹಾಲ್ ಅಂತರರಾಜ್ಯ ವಾಹನ ಕಳ್ಳ. ತನ್ನ ಸಹಚರರ ಮೂಲಕ ವಾಹನಗಳನ್ನು ಕಳವು ಮಾಡಿಸುತ್ತಿದ್ದ ಆತ ಅವುಗಳ ದಾಖಲೆಗಳನ್ನು ತಿರುಚುತ್ತಿದ್ದ. ವಾಹನಗಳ ರೂಪವನ್ನೇ ಬದಲಿಸಿ ಇತರರಿಗೆ ಮಾರಾಟ ಮಾಡುತ್ತಿದ್ದ. ಹತ್ತು ವರ್ಷಗಳ ಹಿಂದೆ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಈತ ಬಳಿಕ ತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಕೊಲೆ ಪ್ರಕರಣವೂ ಈತನ ಮೇಲಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕಾಮಾಕ್ಷಿಪಾಳ್ಯ, ಜಿಗಣಿ, ಮಾಗಡಿ, ಹಿರಿಸಾವೆ, ಸವಣೂರು, ಶಿಕಾರಿಪುರ, ಹಾಸನ ನಗರ, ಹಳೆಬೀಡು, ರಾಣೆಬೆನ್ನೂರು ಠಾಣೆ ವ್ಯಾಪ್ತಿಯಲ್ಲಿ ಲಾರಿಗಳನ್ನು ಕದ್ದಿರುವುದು ವಿಚಾರಣೆಯಿಂದ ಗೊತ್ತಾಗಿದೆ. ಹುಂಡೈ ಕಾರನ್ನು ನವದೆಹಲಿಯಿಂದ ಕದ್ದು ತಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>