‘ಕಳ್ಳತನ ಮಾಡುವ ಸಂಬಂಧ ಜೈಲಿನಲ್ಲೇ ಸಂಚು ರೂಪಿಸಿದ್ದರು. ತಿಂಗಳ ಹಿಂದಷ್ಟೇ ಜಾಮೀನು ಪಡೆದುಕೊಂಡು ಜೈಲಿನಿಂದ ಹೊರಬಂದಿದ್ದ ಆರೋಪಿಗಳು, ಬಿಎಂಟಿಸಿ ಬಸ್ನಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಸರಗಳವು ಮಾಡಿದ್ದರು. ಕಾಮಾಕ್ಷಿಪಾಳ್ಯ ನಿವಾಸಿಯೊಬ್ಬರು ನೀಡಿದ್ದ ದೂರು ಆಧರಿಸಿ ತನಿಖೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದರು’ ಎಂದೂ ತಿಳಿಸಿದರು.