ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಕಮಲ್‌ ಪಂತ್ ನೇಮಕ 

Last Updated 31 ಜುಲೈ 2020, 9:20 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕೆಲವೇ ಗಂಟೆಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಇದುವರೆಗೂ ಕಮಿಷನರ್ ಸ್ಥಾನದಲ್ಲಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ. ಕಮಲ್ ಪಂತ್ ಅವರಿಗೆ ಅವರಿಗೆ ಅಧಿಕಾರ ಹಸ್ತಾಂತರಿಸಿ ಭಾಸ್ಕರ್ ರಾವ್ ಹೊಸ ಹುದ್ದೆಗೆ ಹೋಗಲಿದ್ದಾರೆ‌.

1990ನೇ ಐಪಿಎಸ್ ಬ್ಯಾಚ್ ಅಧಿಕಾರಿಯಾದ ಕಮಲ್ ಪಂತ್ ಸದ್ಯ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಅವರು ಈಗ ಕಮಿಷನರ್ ಆಗಿ ನೇಮಕಗೊಂಡಿದ್ದು, ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

ಗುಪ್ತದಳದ ಎಡಿಜಿಪಿ ಆಗಿ, ಸಿಐಡಿಯಲ್ಲಿದ್ದ ಎಡಿಜಿಪಿ ಬಿ.ದಯಾನಂದ್ ಅವರನ್ನು ವರ್ಗಾಯಿಸಲಾಗಿದೆ‌. ಅವರು ಸಹ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣೆ ಆದೇಶ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT