ಬೆಂಗಳೂರು: ‘ಪ್ರೀತಿ ನಿರಾಕರಿಸಿದರೆಂಬ ಕಾರಣಕ್ಕೆ 24 ವರ್ಷದ ಯುವತಿ ಮೇಲೆಆ್ಯಸಿಡ್ ಎರಚಿ ಪರಾರಿಯಾಗಿರುವ ಆರೋಪಿ ನಾಗೇಶ್ ಅಲಿಯಾಸ್ ನಾಗರಾಜ್ ಯಾವುದೇ ಸುಳಿವು ಬಿಟ್ಟಿಲ್ಲ’ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.
‘ಆರೋಪಿಯು ಪೂರ್ವ ಯೋಜಿತವಾಗಿ ದಾಳಿ ನಡೆಸಿದ್ದಾನೆ. ಈ ಪ್ರಕರಣವನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಲುಕ್ಔಟ್ ಸಹ ಹೊರಡಿಸಲಾಗಿದ್ದು, ಹೊರ ರಾಜ್ಯಗಳಿಗೂ ವಿಶೇಷ ತಂಡಗಳನ್ನು ಕಳುಹಿಸಿದ್ದೇವೆ. ಅಲ್ಲಿನ ಠಾಣೆಗಳಿಗೂ ಆತನ ಕುರಿತ ಮಾಹಿತಿ ರವಾನಿಸಿದ್ದೇವೆ’ ಎಂದು ಹೇಳಿದ್ದಾರೆ.