ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು,‘ಕರ್ಫ್ಯೂ ಸಮಯದಲ್ಲಿಬೇರೆ ಸ್ಥಳಗಳಿಗೆ ಪ್ರಯಾಣಿಸುವವರು ಪ್ರಯಾಣಕ್ಕೆ ಸಂಬಂಧಿಸಿದ ಟಿಕೆಟ್ಗಳನ್ನು ತೋರಿಸಬೇಕು. ಆಸ್ಪತ್ರೆಗಳಿಗೆ ತೆರಳುವವರೂ ಸೂಕ್ತ ದಾಖಲೆಗಳನ್ನು ಹೊಂದಿರಬೇಕು. ಯಾವುದೇ ದಾಖಲೆಗಳಿಲ್ಲದೆ, ಸುಖಾಸುಮ್ಮನೆ ರಸ್ತೆಗಳಲ್ಲಿ ಸಂಚರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಿದ್ದೇವೆ’ ಎಂದು ಎಚ್ಚರಿಸಿದರು.