ನಾಗವಾರ–ಕಾಳೇನ ಅಗ್ರಹಾರ ಮೆಟ್ರೊ ಮಾರ್ಗದಲ್ಲಿ ಕಾವೇರಿ ಎಂಪೊರಿಯಂ ಜಂಕ್ಷನ್ನಿಂದ ಕಬ್ಬನ್ ರಸ್ತೆ ಜಂಕ್ಷನ್ವರೆಗೆ ಅಂತರ್ಬದಲಾವಣೆಯ (ಇಂಟರ್ಚೇಂಜ್) ಎಂ.ಜಿ. ರಸ್ತೆ ಮೆಟ್ರೊ ಭೂಗತ ನಿಲ್ದಾಣ ನಿರ್ಮಿಸಲು ಕಾಮರಾಜ್ ರಸ್ತೆಯನ್ನು 2019ರಲ್ಲಿ ಬಿಎಂಆರ್ಸಿಎಲ್ ಮುಚ್ಚಿತ್ತು. ಆದರೆ, ಭೂಮಿ ಹಸ್ತಾಂತರ, ಮರಗಳ ತೆರವು ಪ್ರಕ್ರಿಯೆ ವಿಳಂಬವಾಗಿದ್ದರಿಂದ ಕಾಮಗಾರಿ ತುಂಬಾ ನಿಧಾನವಾಗಿ ಸಾಗಿತ್ತು. ಮಧ್ಯೆ ಕೋವಿಡ್ ಬಿಕ್ಕಟ್ಟು ಕೂಡಾ ವಿಳಂಬಕ್ಕೆ ಕಾರಣವಾಯಿತು.