<p><strong>ಯಲಹಂಕ: </strong>‘ವಿಶಿಷ್ಟ ಶೈಲಿಯ ಕೀರ್ತನೆಗಳು ಮತ್ತು ಕೃತಿಗಳ ಮೂಲಕ ಸಮಾಜಕ್ಕೆ ಭಕ್ತಿ, ಸಮಾನತೆ ಮತ್ತು ಸಾಮಾಜಿಕ ಸುಧಾರಣೆಯ ಸಂದೇಶಗಳನ್ನು ಸಾರಿದ ಮಹಾಪುರುಷ ಕನಕದಾಸರುʼ ಎಂದು ಹೊಸದುರ್ಗ ಶಾಖಾಮಠ ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಬಣ್ಣಿಸಿದರು.</p>.<p>ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ಚಿಕ್ಕಬೊಮ್ಮಸಂದ್ರದಲ್ಲಿ ಆಯೋಜಿಸಿದ್ದ 538ನೇ ಕನಕ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಕನಕದಾಸರ ಜೀವನ ಮತ್ತು ಬೋಧನೆಗಳು ಸಮಾಜಕ್ಕೆ ಇಂದಿಗೂ ಪ್ರಸ್ತುತ ಮತ್ತು ಸ್ಫೂರ್ತಿಯಾಗಿವೆ ಎಂದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿದರು. ಸಮಾಜದ ಹಿರಿಯ ಗಣ್ಯರು ಹಾಗೂ ಸ್ಥಳೀಯ ಮುಖಂಡರನ್ನು ಸನ್ಮಾನಿಸಲಾಯಿತು.</p>.<p>ಕಾಗಿನೆಲೆ ಕನಕ ಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕಿನ ಯಲಹಂಕ ಶಾಖೆಗೆ ಚಾಲನೆ ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷ ದೇವರಾಜ ಸುಬ್ಬರಾಯಪ್ಪ, ಉಪಾಧ್ಯಕ್ಷ ಕೃಷ್ಣಪ್ಪ.ಎಚ್.ಆರ್, ನಿರ್ದೇಶಕ ಎಂ.ಮುನಿರಾಜು ಉಪಸ್ಥಿತರಿದ್ದರು.</p>.<p>ಬೈಕ್ ರ್ಯಾಲಿ: ಕನಕ ಜಯಂತ್ಯುತ್ಸವದ ಪ್ರಯುಕ್ತ ಸಂಗೊಳ್ಳಿ ರಾಯಣ್ಣ ಯುವಸೇನೆಯ ಕಾರ್ಯಕರ್ತರು, ಚಿಕ್ಕಬೊಮ್ಮಸಂದ್ರ ಮತ್ತು ಯಲಹಂಕ ಉಪನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.</p>.<p>ಮೆರವಣಿಗೆ: ಕನಕದಾಸರ ಪುತ್ಥಳಿಯನ್ನು ಬೆಳ್ಳಿರಥದಲ್ಲಿಟ್ಟು, ಚಿಕ್ಕಬೊಮ್ಮಸಂದ್ರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ವಿವಿಧ ಜಾನಪದ ಕಲಾತಂಡಗಳು ಪ್ರದರ್ಶನ ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>‘ವಿಶಿಷ್ಟ ಶೈಲಿಯ ಕೀರ್ತನೆಗಳು ಮತ್ತು ಕೃತಿಗಳ ಮೂಲಕ ಸಮಾಜಕ್ಕೆ ಭಕ್ತಿ, ಸಮಾನತೆ ಮತ್ತು ಸಾಮಾಜಿಕ ಸುಧಾರಣೆಯ ಸಂದೇಶಗಳನ್ನು ಸಾರಿದ ಮಹಾಪುರುಷ ಕನಕದಾಸರುʼ ಎಂದು ಹೊಸದುರ್ಗ ಶಾಖಾಮಠ ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಬಣ್ಣಿಸಿದರು.</p>.<p>ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ಚಿಕ್ಕಬೊಮ್ಮಸಂದ್ರದಲ್ಲಿ ಆಯೋಜಿಸಿದ್ದ 538ನೇ ಕನಕ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಕನಕದಾಸರ ಜೀವನ ಮತ್ತು ಬೋಧನೆಗಳು ಸಮಾಜಕ್ಕೆ ಇಂದಿಗೂ ಪ್ರಸ್ತುತ ಮತ್ತು ಸ್ಫೂರ್ತಿಯಾಗಿವೆ ಎಂದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿದರು. ಸಮಾಜದ ಹಿರಿಯ ಗಣ್ಯರು ಹಾಗೂ ಸ್ಥಳೀಯ ಮುಖಂಡರನ್ನು ಸನ್ಮಾನಿಸಲಾಯಿತು.</p>.<p>ಕಾಗಿನೆಲೆ ಕನಕ ಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕಿನ ಯಲಹಂಕ ಶಾಖೆಗೆ ಚಾಲನೆ ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷ ದೇವರಾಜ ಸುಬ್ಬರಾಯಪ್ಪ, ಉಪಾಧ್ಯಕ್ಷ ಕೃಷ್ಣಪ್ಪ.ಎಚ್.ಆರ್, ನಿರ್ದೇಶಕ ಎಂ.ಮುನಿರಾಜು ಉಪಸ್ಥಿತರಿದ್ದರು.</p>.<p>ಬೈಕ್ ರ್ಯಾಲಿ: ಕನಕ ಜಯಂತ್ಯುತ್ಸವದ ಪ್ರಯುಕ್ತ ಸಂಗೊಳ್ಳಿ ರಾಯಣ್ಣ ಯುವಸೇನೆಯ ಕಾರ್ಯಕರ್ತರು, ಚಿಕ್ಕಬೊಮ್ಮಸಂದ್ರ ಮತ್ತು ಯಲಹಂಕ ಉಪನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.</p>.<p>ಮೆರವಣಿಗೆ: ಕನಕದಾಸರ ಪುತ್ಥಳಿಯನ್ನು ಬೆಳ್ಳಿರಥದಲ್ಲಿಟ್ಟು, ಚಿಕ್ಕಬೊಮ್ಮಸಂದ್ರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ವಿವಿಧ ಜಾನಪದ ಕಲಾತಂಡಗಳು ಪ್ರದರ್ಶನ ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>