<p><strong>ಕನಕಪುರ: </strong>ಪತ್ನಿಯನ್ನು ಕೊಲೆ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಪತಿಯನ್ನು ಶುಕ್ರವಾರ ಬಂಧಿಸಲಾಗಿದೆ.</p>.<p>ತಾಲ್ಲೂಕಿನ ಸಾತನೂರು ಹೋಬಳಿಯ ಯಲವಳ್ಳಿಯ ಕುಸುಮಾ ಅಲಿಯಾಸ್ ಗೀತಾ (25) ಕೊಲೆಯಾದವರು. ಕೆಎಸ್ಆರ್ಟಿಸಿಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಲೋಕೇಶ್ (30) ಬಂಧಿತ.</p>.<p>ಲೋಕೇಶ್ ಕನಕಪುರನಗರದ ಗೋಪಾಲಕೃಷ್ಣ ಟೆಂಟ್ ಏರಿಯಾದ ನಿವಾಸಿ. ವಿವಾಹವಾದ ನಂತರ ಯಲವಳ್ಳಿಯ ಅಜ್ಜಿ ಮನೆಯಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.</p>.<p>ಗೀತಾ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹೊಂಕಣ ಗ್ರಾಮದವರು. ಆರೋಪಿಗೆ ಆಕೆಯುನೆಲಮಂಗಲದ ಮಾದನಾಯನಹಳ್ಳಿಯ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿತ್ತು. ಆಕೆಯನ್ನು ಪ್ರೇಮಿಸಿ ನಾಲ್ಕು ವರ್ಷದ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ.</p>.<p>ಜೂನ್ 1ರಂದು ಪತ್ನಿಯನ್ನು ಕೊಲೆ ಮಾಡಿರುವ ಲೋಕೇಶ್ ಶವವನ್ನು ಯೂರಿಯಾ ಚೀಲದಲ್ಲಿ ತುಂಬಿ ಬೈಕ್ನಲ್ಲಿ ಜಮೀನಿಗೆ ಸಾಗಿಸಿದ್ದಾನೆ. ಎಳ್ಳು ಬೆಳೆಯಿದ್ದ ಜಾಗದಲ್ಲಿ ಗುಂಡಿ ತೆಗೆದು ಹೂತಿದ್ದಾನೆ. ಜಮೀನನ್ನು ಮಟ್ಟ ಮಾಡಿ ಎಳ್ಳಿನ ಪೈರುಗಳನ್ನು ಶವ ಹೂತಿಟ್ಟ ಜಾಗದ ಮೇಲೆ ನಾಟಿ ಮಾಡಿದ್ದಾನೆ. ಬಳಿಕಮನೆಯಿಂದ ಹೊರಹೋದ ಪತ್ನಿ ವಾಪಸ್ ಬಂದಿಲ್ಲ ಎಂದು ದೂರು ಕೊಟ್ಟಿದ್ದ. ಆತನ ಮೊಬೈಲ್ ಕರೆ ವಿವರ ಪರಿಶೀಲಿಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಇಬ್ಬರ ನಡುವೆ ಜಗಳ ನಡೆದಿದೆ. ಪತ್ನಿಯ ಕಪಾಳಕ್ಕೆ ಹೊಡೆದಾಗ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಭಯದಿಂದ ಬೈಕ್ನಲ್ಲಿ ಶವ ಸಾಗಿಸಿ ಮುಚ್ಚಿ ಹಾಕಿ ಅನುಮಾನ ಬರಬಾರದೆಂದು ದೂರು ಕೊಟ್ಟೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉಪ ವಿಭಾಗಾಧಿಕಾರಿ ಮಂಜುನಾಥ್, ಡಿವೈಎಸ್ಪಿ ರಮೇಶ್, ತಹಶೀಲ್ದಾರ್ ವಿಶ್ವನಾಥ್ ವಿ.ಆರ್. ಸಮ್ಮುಖದಲ್ಲಿ ಗುಂಡಿಯಿಂದ ಶವ ತೆಗೆಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.ಸರ್ಕಲ್ ಇನ್ಸ್ಪೆಕ್ಟರ್ ಟಿ.ಟಿ. ಕೃಷ್ಣ, ಸಾತನೂರು ಸಬ್ ಇನ್ಸ್ಪೆಕ್ಟರ್ ರವಿಕುಮಾರ್, ಎಎಸ್ಐ ದುರ್ಗೇಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಪತ್ನಿಯನ್ನು ಕೊಲೆ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಪತಿಯನ್ನು ಶುಕ್ರವಾರ ಬಂಧಿಸಲಾಗಿದೆ.</p>.<p>ತಾಲ್ಲೂಕಿನ ಸಾತನೂರು ಹೋಬಳಿಯ ಯಲವಳ್ಳಿಯ ಕುಸುಮಾ ಅಲಿಯಾಸ್ ಗೀತಾ (25) ಕೊಲೆಯಾದವರು. ಕೆಎಸ್ಆರ್ಟಿಸಿಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಲೋಕೇಶ್ (30) ಬಂಧಿತ.</p>.<p>ಲೋಕೇಶ್ ಕನಕಪುರನಗರದ ಗೋಪಾಲಕೃಷ್ಣ ಟೆಂಟ್ ಏರಿಯಾದ ನಿವಾಸಿ. ವಿವಾಹವಾದ ನಂತರ ಯಲವಳ್ಳಿಯ ಅಜ್ಜಿ ಮನೆಯಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.</p>.<p>ಗೀತಾ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹೊಂಕಣ ಗ್ರಾಮದವರು. ಆರೋಪಿಗೆ ಆಕೆಯುನೆಲಮಂಗಲದ ಮಾದನಾಯನಹಳ್ಳಿಯ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿತ್ತು. ಆಕೆಯನ್ನು ಪ್ರೇಮಿಸಿ ನಾಲ್ಕು ವರ್ಷದ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ.</p>.<p>ಜೂನ್ 1ರಂದು ಪತ್ನಿಯನ್ನು ಕೊಲೆ ಮಾಡಿರುವ ಲೋಕೇಶ್ ಶವವನ್ನು ಯೂರಿಯಾ ಚೀಲದಲ್ಲಿ ತುಂಬಿ ಬೈಕ್ನಲ್ಲಿ ಜಮೀನಿಗೆ ಸಾಗಿಸಿದ್ದಾನೆ. ಎಳ್ಳು ಬೆಳೆಯಿದ್ದ ಜಾಗದಲ್ಲಿ ಗುಂಡಿ ತೆಗೆದು ಹೂತಿದ್ದಾನೆ. ಜಮೀನನ್ನು ಮಟ್ಟ ಮಾಡಿ ಎಳ್ಳಿನ ಪೈರುಗಳನ್ನು ಶವ ಹೂತಿಟ್ಟ ಜಾಗದ ಮೇಲೆ ನಾಟಿ ಮಾಡಿದ್ದಾನೆ. ಬಳಿಕಮನೆಯಿಂದ ಹೊರಹೋದ ಪತ್ನಿ ವಾಪಸ್ ಬಂದಿಲ್ಲ ಎಂದು ದೂರು ಕೊಟ್ಟಿದ್ದ. ಆತನ ಮೊಬೈಲ್ ಕರೆ ವಿವರ ಪರಿಶೀಲಿಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಇಬ್ಬರ ನಡುವೆ ಜಗಳ ನಡೆದಿದೆ. ಪತ್ನಿಯ ಕಪಾಳಕ್ಕೆ ಹೊಡೆದಾಗ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಭಯದಿಂದ ಬೈಕ್ನಲ್ಲಿ ಶವ ಸಾಗಿಸಿ ಮುಚ್ಚಿ ಹಾಕಿ ಅನುಮಾನ ಬರಬಾರದೆಂದು ದೂರು ಕೊಟ್ಟೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉಪ ವಿಭಾಗಾಧಿಕಾರಿ ಮಂಜುನಾಥ್, ಡಿವೈಎಸ್ಪಿ ರಮೇಶ್, ತಹಶೀಲ್ದಾರ್ ವಿಶ್ವನಾಥ್ ವಿ.ಆರ್. ಸಮ್ಮುಖದಲ್ಲಿ ಗುಂಡಿಯಿಂದ ಶವ ತೆಗೆಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.ಸರ್ಕಲ್ ಇನ್ಸ್ಪೆಕ್ಟರ್ ಟಿ.ಟಿ. ಕೃಷ್ಣ, ಸಾತನೂರು ಸಬ್ ಇನ್ಸ್ಪೆಕ್ಟರ್ ರವಿಕುಮಾರ್, ಎಎಸ್ಐ ದುರ್ಗೇಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>