<p><strong>ಬೆಂಗಳೂರು</strong>: ವಿಧಾನಮಂಡಲದ ಅಧಿವೇಶನಲ್ಲಿ ಪಕ್ಷದ ಎಲ್ಲ ಶಾಸಕರೂ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದ್ದಾರೆ.</p>.<p>ವಿಧಾನಪರಿಷತ್ ಚುನಾವಣೆಯಲ್ಲಿ ಸವದಿ ಪರವಾಗಿ ಬೆಳಿಗ್ಗೆಯೇ ಮತ ಚಲಾಯಿಸಿ ನಂತರ ಸದನದ ಒಳಗೆ ಹೋಗೋಣ, ಸಂಜೆಯವರೆಗೆ ಕಾಯುವುದು ಬೇಡ ಎಂದು ಅವರು ಹೇಳಿದರು. ಭಾನುವಾರ ರಾತ್ರಿ ಶಾಂಗ್ರಿಲಾ ಹೊಟೇಲ್ನಲ್ಲಿ ಸಭೆ ನಡೆಯಿತು.</p>.<p>ಬಜೆಟ್ಗೆ ಸಂಬಂಧಿಸಿದಂತೆ ಯಾವುದೇ ಸಲಹೆಗಳಿದ್ದರೂ ನೀಡಬಹುದು ಎಂದು ಯಡಿಯೂರಪ್ಪ ಹೇಳಿದರು.</p>.<p><strong>ಯತ್ನಾಳ ಗೈರು:</strong> ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಮೂಲದ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡುತ್ತೇನೆ<br />ಎಂದು ಹೇಳಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭೆಗೆ ಗೈರಾಗಿದ್ದರು.</p>.<p>ತಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಯತ್ನಾಳ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಸಚಿವರಾದ ಕೆ.ಎಸ್.ಈಶ್ವರಪ್ಪ ಮತ್ತು ಬಿ.ಶ್ರೀರಾಮುಲು ಅವರು ವೈಯಕ್ತಿಕ ಕಾರಣಗಳಿಗಾಗಿ ಸಭೆಗೆ ಹಾಜರಾಗಿರಲಿಲ್ಲ. ನೂತನ ಸಚಿವರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಮಂಡಲದ ಅಧಿವೇಶನಲ್ಲಿ ಪಕ್ಷದ ಎಲ್ಲ ಶಾಸಕರೂ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದ್ದಾರೆ.</p>.<p>ವಿಧಾನಪರಿಷತ್ ಚುನಾವಣೆಯಲ್ಲಿ ಸವದಿ ಪರವಾಗಿ ಬೆಳಿಗ್ಗೆಯೇ ಮತ ಚಲಾಯಿಸಿ ನಂತರ ಸದನದ ಒಳಗೆ ಹೋಗೋಣ, ಸಂಜೆಯವರೆಗೆ ಕಾಯುವುದು ಬೇಡ ಎಂದು ಅವರು ಹೇಳಿದರು. ಭಾನುವಾರ ರಾತ್ರಿ ಶಾಂಗ್ರಿಲಾ ಹೊಟೇಲ್ನಲ್ಲಿ ಸಭೆ ನಡೆಯಿತು.</p>.<p>ಬಜೆಟ್ಗೆ ಸಂಬಂಧಿಸಿದಂತೆ ಯಾವುದೇ ಸಲಹೆಗಳಿದ್ದರೂ ನೀಡಬಹುದು ಎಂದು ಯಡಿಯೂರಪ್ಪ ಹೇಳಿದರು.</p>.<p><strong>ಯತ್ನಾಳ ಗೈರು:</strong> ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಮೂಲದ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡುತ್ತೇನೆ<br />ಎಂದು ಹೇಳಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭೆಗೆ ಗೈರಾಗಿದ್ದರು.</p>.<p>ತಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಯತ್ನಾಳ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಸಚಿವರಾದ ಕೆ.ಎಸ್.ಈಶ್ವರಪ್ಪ ಮತ್ತು ಬಿ.ಶ್ರೀರಾಮುಲು ಅವರು ವೈಯಕ್ತಿಕ ಕಾರಣಗಳಿಗಾಗಿ ಸಭೆಗೆ ಹಾಜರಾಗಿರಲಿಲ್ಲ. ನೂತನ ಸಚಿವರು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>