ಕೆಲದಿನಗಳ ಹಿಂದಷ್ಟೇ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉಡುಪಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂಗ್ರೆಸ್ ಕಟ್ಟಾಳು, ಪಕ್ಷದ ಬಾವುಟ ಹಿಡಿದು ದುಡಿದವರಿಗೆ ಅಕಾಡೆಮಿಗಳಲ್ಲಿ ಅವಕಾಶ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲಿಯೇ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ವಿಜಯಪುರದ ಚನ್ನಪ್ಪ ಕಟ್ಟಿ, ಕರ್ನಾಟಕ ನಾಟಕ ಅಕಾಡೆಮಿಗೆ ಕೆ.ವಿ. ನಾಗರಾಜಮೂರ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಎಲ್.ಎನ್. ಮುಕುಂದರಾಜ್, ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಮೈಸೂರಿನ ಮಾನಸ, ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಗೆ ಕೃಪಾ ಫಡ್ಕೆ, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪ.ಸ.ಕುಮಾರ್ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.