ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧಿಕ ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಗುವುದು. ತಮಿಳುನಾಡಿನ ಗುಮ್ಮಳಾಪುರದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ ಮುಖ್ಯೋಪಾಧ್ಯಾಯ ಪಿ. ವೆಂಕಟೇಶ್ ಅವರನ್ನು ಗೌರವಿಸಲಾಗುವುದು ಎಂದು ಸಂಚಾಲಕ ರಾ.ನಂ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.