<p><strong>ಬೆಂಗಳೂರು:</strong> ಕನ್ನಡ ಗೆಳೆಯರ ಬಳಗವು ಕೊಡಮಾಡುವ ‘ಕನ್ನಡ ಅರವಿಂದ ಪ್ರಶಸ್ತಿ’ಗೆ ಕನ್ನಡ ಪರ ಹೋರಾಟಗಾರ ಬಿ.ವಿ ರಾಘವನ್ ಹಾಗೂ ‘ಕನ್ನಡ ಚಿರಂಜೀವಿ ಪ್ರಶಸ್ತಿ’ಗೆ ಕನ್ನಡ ಪರಿಚಾರಕ ಎಸ್. ಶಿವಲಿಂಗಯ್ಯ ಆಯ್ಕೆಯಾಗಿದ್ದಾರೆ.</p>.<p>ಬಳಗವು ಡಿ.6ರಂದು ಬಸವನಗುಡಿಯ ನ್ಯಾಷನಲ್ ಸ್ಕೂಲ್ ವೃತ್ತದಲ್ಲಿರುವ ಬಿ.ಎಂ.ಶ್ರೀ ಪ್ರತಿಮೆ ಎದುರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.</p>.<p>ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧಿಕ ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಗುವುದು. ತಮಿಳುನಾಡಿನ ಗುಮ್ಮಳಾಪುರದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ ಮುಖ್ಯೋಪಾಧ್ಯಾಯ ಪಿ. ವೆಂಕಟೇಶ್ ಅವರನ್ನು ಗೌರವಿಸಲಾಗುವುದು ಎಂದು ಸಂಚಾಲಕ ರಾ.ನಂ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಗೆಳೆಯರ ಬಳಗವು ಕೊಡಮಾಡುವ ‘ಕನ್ನಡ ಅರವಿಂದ ಪ್ರಶಸ್ತಿ’ಗೆ ಕನ್ನಡ ಪರ ಹೋರಾಟಗಾರ ಬಿ.ವಿ ರಾಘವನ್ ಹಾಗೂ ‘ಕನ್ನಡ ಚಿರಂಜೀವಿ ಪ್ರಶಸ್ತಿ’ಗೆ ಕನ್ನಡ ಪರಿಚಾರಕ ಎಸ್. ಶಿವಲಿಂಗಯ್ಯ ಆಯ್ಕೆಯಾಗಿದ್ದಾರೆ.</p>.<p>ಬಳಗವು ಡಿ.6ರಂದು ಬಸವನಗುಡಿಯ ನ್ಯಾಷನಲ್ ಸ್ಕೂಲ್ ವೃತ್ತದಲ್ಲಿರುವ ಬಿ.ಎಂ.ಶ್ರೀ ಪ್ರತಿಮೆ ಎದುರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.</p>.<p>ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧಿಕ ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಗುವುದು. ತಮಿಳುನಾಡಿನ ಗುಮ್ಮಳಾಪುರದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ ಮುಖ್ಯೋಪಾಧ್ಯಾಯ ಪಿ. ವೆಂಕಟೇಶ್ ಅವರನ್ನು ಗೌರವಿಸಲಾಗುವುದು ಎಂದು ಸಂಚಾಲಕ ರಾ.ನಂ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>