‘ಈ ವರ್ಷ ಶೇಷಗಿರಿ ರಾವ್ ಅವರ ಜನ್ಮ ಶತಮಾನೋತ್ಸವದ ವರ್ಷವಾಗಿದೆ. ಆದ್ದರಿಂದ ಸರ್ಕಾರವು ಅವರ ಹೆಸರಿನಲ್ಲಿ ಪ್ರತಿ ವರ್ಷ ನಾಡಿನ ವಿಮರ್ಶಕರೊಬ್ಬರಿಗೆ ಪ್ರಶಸ್ತಿ ನೀಡಿ, ಸ್ಮರಿಸುವ ಕಾರ್ಯ ಮಾಡಬೇಕು. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ದೀವಿಗೆಯನ್ನು ಹಿಡಿಯುವ ಮೂಲಕ ಕನ್ನಡ ಚಳವಳಿಗೆ ಮೌಲ್ಯವನ್ನು ತಂದುಕೊಟ್ಟರು. ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಶ್ರಮಿಸಿದರು’ ಎಂದು ಹೇಳಿದರು.