ಬೆಂಗಳೂರು: ‘ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯ ಧಾಟಿ, ಸಮಯಕ್ಕೆ ಸಂಬಂಧಿಸಿದ ವಿವಾದ 18 ವರ್ಷಗಳ ಬಳಿಕ ನಿವಾರಣೆಯಾಗಿತ್ತು. ಈಗ ಮತ್ತೆ ವಿವಾದ ಸೃಷ್ಟಿಸಿ, ನ್ಯಾಯಾಲಯದ ಮೆಟ್ಟಿಲು ಏರಿರುವುದು ದುರದೃಷ್ಟಕರ’ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ತಿಳಿಸಿದ್ದಾರೆ.