‘ಬಹರೇನ್ನಲ್ಲಿ ಅಲ್ಲಿನ ಕನ್ನಡಿಗರು ಸಂಘಟಿತಗೊಂಡು ಭವ್ಯವಾದ ಕನ್ನಡ ಭವನವನ್ನು ನಿರ್ಮಿಸಿದ್ದಾರೆ. ಎರಡು ವರ್ಷಗಳ ಹಿಂದೆ ಪರಿಷತ್ತು ಮೊದಲ ಬಾರಿಗೆ ಅಂತರರಾಷ್ಟ್ರೀಯ ಕನ್ನಡ ಸಮ್ಮೇಳನವನ್ನು ಅಲ್ಲಿ ನಡೆಸಿತ್ತು. ಕನ್ನಡ ಭವನದ ವೇದಿಕೆಗೆ ‘ಕನ್ನಡ ಸಾಹಿತ್ಯ ಪರಿಷತ್ ವೇದಿಕೆ’ ಎಂದು ಹೆಸರಿಸಬೇಕೆಂಬ ಒಪ್ಪಂದವನ್ನೂ ಮಾಡಿಕೊಳ್ಳಲಾಗಿತ್ತು. ಈ ಭವನದ ನಿರ್ಮಾಣಕ್ಕಾಗಿ ಏಳು ವರ್ಷ ಅಲ್ಲಿನ ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿ ಕಿರಣ್ ಉಪಾಧ್ಯಾಯ ಶ್ರಮಿಸಿದ್ದರು’ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.