<p><strong>ಬೆಂಗಳೂರು</strong>: ಕನ್ನಡ ಶಾಸ್ತ್ರೀಯ ಭಾಷೆ ಅಧ್ಯಯನ ಕೇಂದ್ರಕ್ಕೆ ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ಆವರಣದಲ್ಲಿ 5 ಎಕರೆ ಜಾಗ ನೀಡಲು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒಪ್ಪಿಕೊಂಡಿದ್ದಾರೆ.</p>.<p>ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಬಾರದು ಎಂದು ಮೈಸೂರಿನ ಸಾಹಿತಿಗಳು, ಗಣ್ಯರು ಒತ್ತಡ ಹೇರಿದ್ದರು. ಇದಕ್ಕೆ ಒಪ್ಪಿಗೆ ಸೂಚಿಸಿದ್ದ ರಾಜ್ಯ ಸರ್ಕಾರ 3 ಎಕರೆ ಭೂಮಿ ನೀಡಲು ಒಪ್ಪಿಕೊಂಡಿತ್ತು.</p>.<p>ತಮಿಳುನಾಡು, ಆಂಧ್ರ ರಾಜ್ಯಗಳು ಅಲ್ಲಿನ ಶಾಸ್ತ್ರೀಯ ಭಾಷಾ ಕೇಂದ್ರಗಳ ಸ್ಥಾಪನೆಗೆ 15 ರಿಂದ 20 ಎಕರೆ ಜಾಗ ಮೀಸಲಿಟ್ಟಿವೆ. ಈ ಕುರಿತು ಸಚಿವ ಸಿ.ಟಿ.ರವಿ ಅವರು ಅಶ್ವತ್ಥನಾರಾಯಣ ಅವರ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಶಾಸ್ತ್ರೀಯ ಭಾಷೆ ಅಧ್ಯಯನ ಕೇಂದ್ರಕ್ಕೆ ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ಆವರಣದಲ್ಲಿ 5 ಎಕರೆ ಜಾಗ ನೀಡಲು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒಪ್ಪಿಕೊಂಡಿದ್ದಾರೆ.</p>.<p>ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಬಾರದು ಎಂದು ಮೈಸೂರಿನ ಸಾಹಿತಿಗಳು, ಗಣ್ಯರು ಒತ್ತಡ ಹೇರಿದ್ದರು. ಇದಕ್ಕೆ ಒಪ್ಪಿಗೆ ಸೂಚಿಸಿದ್ದ ರಾಜ್ಯ ಸರ್ಕಾರ 3 ಎಕರೆ ಭೂಮಿ ನೀಡಲು ಒಪ್ಪಿಕೊಂಡಿತ್ತು.</p>.<p>ತಮಿಳುನಾಡು, ಆಂಧ್ರ ರಾಜ್ಯಗಳು ಅಲ್ಲಿನ ಶಾಸ್ತ್ರೀಯ ಭಾಷಾ ಕೇಂದ್ರಗಳ ಸ್ಥಾಪನೆಗೆ 15 ರಿಂದ 20 ಎಕರೆ ಜಾಗ ಮೀಸಲಿಟ್ಟಿವೆ. ಈ ಕುರಿತು ಸಚಿವ ಸಿ.ಟಿ.ರವಿ ಅವರು ಅಶ್ವತ್ಥನಾರಾಯಣ ಅವರ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>