<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಸೇರಿದಂತೆ ನಗರದ ಎಲ್ಲ ಮೆಟ್ರೊ ರೈಲುಗಳು ಮತ್ತು ನಿಲ್ದಾಣಗಳಲ್ಲಿನ ಸೂಚನಾ ಫಲಕಗಳಲ್ಲಿ ಆಯಾ ಸ್ಥಳೀಯ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯಸಭೆಯ ಅಧ್ಯಕ್ಷ, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಸೂಚನೆ ನೀಡಿದರು.</p>.<p>ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ‘ನಮ್ಮ ಮೆಟ್ರೊ’ ರೈಲಿನ ಒಳಗೆ ಮತ್ತು ನಿಲ್ದಾಣಗಳಲ್ಲಿ ಕನ್ನಡವನ್ನು ಹೆಚ್ಚು ಬಳಕೆ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಉತ್ತರ ನೀಡಿದ ನಂತರ, ವೆಂಕಯ್ಯನಾಯ್ಡು ಈ ಸೂಚನೆ ನೀಡಿದರು.</p>.<p>‘ಮೆಟ್ರೊ ರೈಲುಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಸೂಚನಾ ಫಲಕ ಇರಬೇಕು ಎಂದು ಸೂಚನೆ ನೀಡಲಾಗಿದೆ. ಆದರೆ, ‘ನಮ್ಮ ಮೆಟ್ರೊ’ದಲ್ಲಿ ಕನ್ನಡ ಬಳಸದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ಸ್ಪಷ್ಟ ಸೂಚನೆ ನೀಡಲಾಗುವುದು’ ಎಂದು ಪುರಿ ಉತ್ತರಿಸಿದರು.</p>.<p>‘ಮೆಟ್ರೊ ರೈಲುಗಳಲ್ಲಿ ಸ್ಥಳೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವುದರಿಂದ ಪ್ರಾದೇಶಿಕ ಭಾಷೆಯಲ್ಲಿ ಸೂಚನಾ ಫಲಕ ಇರಲೇಬೇಕು ಎಂದು ಉಪರಾಷ್ಟ್ರಪತಿ ಸೂಚಿಸಿದರು’ ಎಂದು ಜಿ.ಸಿ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Subhead"><strong>ಶೀಘ್ರ ಅನುದಾನ ಬಿಡುಗಡೆ:</strong></p>.<p>‘ಹೆಚ್ಚು ಸಂಚಾರದಟ್ಟಣೆ ಸಮಸ್ಯೆ ಎದುರಿಸುತ್ತಿರುವ ವಿಶ್ವದ ಮಹಾನಗರಗಳಲ್ಲಿ ಬೆಂಗಳೂರೂ ಒಂದು. ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ 2018–19ರಲ್ಲಿ ಉಪನಗರ ರೈಲು ಯೋಜನೆ ಘೋಷಿಸಿತು. ಆದರೆ, ಈ ಯೋಜನೆ ಈವರೆಗೆ ಪ್ರಾರಂಭವಾಗಿಲ್ಲ. ನಮ್ಮ ಮೆಟ್ರೊ ಎರಡನೇ ಹಂತದ ಯೋಜನೆಗಳೂ ವಿಳಂಬವಾಗುತ್ತಿವೆ. ಕೇಂದ್ರಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದೇ ವಿಳಂಬಕ್ಕೆ ಕಾರಣ’ ಎಂದು ಚಂದ್ರಶೇಖರ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು.</p>.<p>‘ನಮ್ಮ ಮೆಟ್ರೊ’ದ ಎರಡನೇ ಹಂತದ ಯೋಜನೆಗೆ ₹8,445.63 ಕೋಟಿ ಅನುದಾನ ಘೋಷಿಸಲಾಗಿದೆ. ಹಂತ–ಹಂತವಾಗಿ ಹಣವನ್ನೂ ಬಿಡುಗಡೆ ಮಾಡಲಾಗುತ್ತಿದೆ. ಯೋಜನೆ ವಿಳಂಬವಾಗಲು ಅನುದಾನ ಬಿಡುಗಡೆ ಮಾಡದಿರುವುದು ಕಾರಣ ಎಂಬುದು ಸರಿಯಲ್ಲ. ಮೆಟ್ರೊದ ಎರಡು ವಿಸ್ತರಿತ ಮಾರ್ಗದಲ್ಲಿ ಅರಣ್ಯಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಿದೆ. ಇದಕ್ಕಾಗಿ 4,266 ಮರಗಳನ್ನು ಕಡಿಯಬೇಕಾದ ಅನಿವಾರ್ಯತೆ ಇದೆ. ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಪ್ರಕರಣ ಇತ್ಯರ್ಥವಾದ ನಂತರ, 2021–22ರ ಬಜೆಟ್ನಲ್ಲಿ ಘೋಷಿಸಿರುವ ಅನುದಾನವೂ ಸೇರಿದಂತೆ ಎಲ್ಲ ಹಣ ಬಿಡುಗಡೆ ಮಾಡಲಾಗುವುದು’ ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಸೇರಿದಂತೆ ನಗರದ ಎಲ್ಲ ಮೆಟ್ರೊ ರೈಲುಗಳು ಮತ್ತು ನಿಲ್ದಾಣಗಳಲ್ಲಿನ ಸೂಚನಾ ಫಲಕಗಳಲ್ಲಿ ಆಯಾ ಸ್ಥಳೀಯ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯಸಭೆಯ ಅಧ್ಯಕ್ಷ, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಸೂಚನೆ ನೀಡಿದರು.</p>.<p>ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ‘ನಮ್ಮ ಮೆಟ್ರೊ’ ರೈಲಿನ ಒಳಗೆ ಮತ್ತು ನಿಲ್ದಾಣಗಳಲ್ಲಿ ಕನ್ನಡವನ್ನು ಹೆಚ್ಚು ಬಳಕೆ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಉತ್ತರ ನೀಡಿದ ನಂತರ, ವೆಂಕಯ್ಯನಾಯ್ಡು ಈ ಸೂಚನೆ ನೀಡಿದರು.</p>.<p>‘ಮೆಟ್ರೊ ರೈಲುಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಸೂಚನಾ ಫಲಕ ಇರಬೇಕು ಎಂದು ಸೂಚನೆ ನೀಡಲಾಗಿದೆ. ಆದರೆ, ‘ನಮ್ಮ ಮೆಟ್ರೊ’ದಲ್ಲಿ ಕನ್ನಡ ಬಳಸದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ಸ್ಪಷ್ಟ ಸೂಚನೆ ನೀಡಲಾಗುವುದು’ ಎಂದು ಪುರಿ ಉತ್ತರಿಸಿದರು.</p>.<p>‘ಮೆಟ್ರೊ ರೈಲುಗಳಲ್ಲಿ ಸ್ಥಳೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವುದರಿಂದ ಪ್ರಾದೇಶಿಕ ಭಾಷೆಯಲ್ಲಿ ಸೂಚನಾ ಫಲಕ ಇರಲೇಬೇಕು ಎಂದು ಉಪರಾಷ್ಟ್ರಪತಿ ಸೂಚಿಸಿದರು’ ಎಂದು ಜಿ.ಸಿ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Subhead"><strong>ಶೀಘ್ರ ಅನುದಾನ ಬಿಡುಗಡೆ:</strong></p>.<p>‘ಹೆಚ್ಚು ಸಂಚಾರದಟ್ಟಣೆ ಸಮಸ್ಯೆ ಎದುರಿಸುತ್ತಿರುವ ವಿಶ್ವದ ಮಹಾನಗರಗಳಲ್ಲಿ ಬೆಂಗಳೂರೂ ಒಂದು. ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ 2018–19ರಲ್ಲಿ ಉಪನಗರ ರೈಲು ಯೋಜನೆ ಘೋಷಿಸಿತು. ಆದರೆ, ಈ ಯೋಜನೆ ಈವರೆಗೆ ಪ್ರಾರಂಭವಾಗಿಲ್ಲ. ನಮ್ಮ ಮೆಟ್ರೊ ಎರಡನೇ ಹಂತದ ಯೋಜನೆಗಳೂ ವಿಳಂಬವಾಗುತ್ತಿವೆ. ಕೇಂದ್ರಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದೇ ವಿಳಂಬಕ್ಕೆ ಕಾರಣ’ ಎಂದು ಚಂದ್ರಶೇಖರ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು.</p>.<p>‘ನಮ್ಮ ಮೆಟ್ರೊ’ದ ಎರಡನೇ ಹಂತದ ಯೋಜನೆಗೆ ₹8,445.63 ಕೋಟಿ ಅನುದಾನ ಘೋಷಿಸಲಾಗಿದೆ. ಹಂತ–ಹಂತವಾಗಿ ಹಣವನ್ನೂ ಬಿಡುಗಡೆ ಮಾಡಲಾಗುತ್ತಿದೆ. ಯೋಜನೆ ವಿಳಂಬವಾಗಲು ಅನುದಾನ ಬಿಡುಗಡೆ ಮಾಡದಿರುವುದು ಕಾರಣ ಎಂಬುದು ಸರಿಯಲ್ಲ. ಮೆಟ್ರೊದ ಎರಡು ವಿಸ್ತರಿತ ಮಾರ್ಗದಲ್ಲಿ ಅರಣ್ಯಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಿದೆ. ಇದಕ್ಕಾಗಿ 4,266 ಮರಗಳನ್ನು ಕಡಿಯಬೇಕಾದ ಅನಿವಾರ್ಯತೆ ಇದೆ. ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಪ್ರಕರಣ ಇತ್ಯರ್ಥವಾದ ನಂತರ, 2021–22ರ ಬಜೆಟ್ನಲ್ಲಿ ಘೋಷಿಸಿರುವ ಅನುದಾನವೂ ಸೇರಿದಂತೆ ಎಲ್ಲ ಹಣ ಬಿಡುಗಡೆ ಮಾಡಲಾಗುವುದು’ ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>