ಐಐಎಸ್ಸಿ ಜತೆಗೆ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತ ನಾಡಿದ ಅವರು, ‘ಕನ್ನಡ ಅನುಷ್ಠಾನದ ವಿಷಯದಲ್ಲಿ ಕೇವಲ ಕಣ್ಣೊರೆಸುವ ತಂತ್ರ ಅನುಸರಿಸಲಾಗುತ್ತಿದೆ. ರಾಜ್ಯ ಸರ್ಕಾರವು ಸಂಸ್ಥೆಗೆ ಈ ಮೊದಲು 440 ಎಕರೆ ನೀಡಿತ್ತು. ಇತ್ತೀಚೆಗೆ ಚಿತ್ರದುರ್ಗದ ಸಮೀಪ 1,500 ಎಕರೆ ಒದಗಿಸಿದೆ. ಇಷ್ಟು ದೊಡ್ಡ ಮಟ್ಟದ ಜಾಗ ನೀಡಿರುವುದು ಕನ್ನಡಿಗರನ್ನು ಕಡೆಗಣಿಸಲಿಕ್ಕಲ್ಲ’ ಎಂದರು.