‘ಬೆಂಗಳೂರಿನ ಮಹಾ ಧರ್ಮಕ್ಷೇತ್ರದ ಜತೆಗೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14 ಧರ್ಮ ಕ್ಷೇತ್ರಗಳಿವೆ. ತಮಿಳು, ಮಲೆಯಾಳಂ ಹಾಗೂ ಇಂಗ್ಲಿಷ್ ಭಾಷೆಗಳನ್ನು ಚರ್ಚ್ಗಳ ಪೂಜಾ ವಿಧಿಗಳಲ್ಲಿ ಹೇರಿಕೆ ಮಾಡಲಾಗಿದೆ. ಚರ್ಚ್ಗಳ ಆಡಳಿತದಲ್ಲಿ ಅನ್ಯ ಭಾಷಿಕರೇ ಹೆಚ್ಚಾಗಿ ನೇಮಕರಾಗುತ್ತಿದ್ದಾರೆ. ಕನ್ನಡಿಗರನ್ನು ಗುರುಗಳಾಗಿ ನೇಮಕ ಮಾಡಲಾಗುತ್ತಿಲ್ಲ. ಪ್ರಾದೇಶಿಕ ಗುರು ಮಠವೂ ಸ್ಥಾಪನೆಯಾಗಿಲ್ಲ. ಹಾಗಾಗಿ, ಪ್ರಾಧಿಕಾರವು ಸಂಬಂಧಪಟ್ಟ ಧರ್ಮಾಧ್ಯಕ್ಷರ ಮೇಲೆ ಒತ್ತಡ ತಂದು, ಚರ್ಚ್ಗಳಲ್ಲಿ ಕನ್ನಡ ಭಾಷೆ ಅನುಷ್ಠಾನ ಮಾಡಲು ಮುಂದಾಗಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.