ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಎನ್.ಎಮ್. ನಾಗರಾಜ್, ‘ವೈದ್ಯಕೀಯ ವಲಯದಲ್ಲೂ ಕನ್ನಡದ ಬಳಕೆ ಹೆಚ್ಚಬೇಕು. ಕೋಟ್ಯಂತರ ಜನರ ಮಾತೃಭಾಷೆಯಾಗಿರುವ ಕನ್ನಡದಲ್ಲಿಯೂ ವೈದ್ಯಕೀಯ ಶಿಕ್ಷಣ ಸಿಗುವಂತಾಗಬೇಕು. ಅನಾರೋಗ್ಯ ಸಮಸ್ಯೆಗಳನ್ನು ನಿರ್ಣಯಿಸುವಲ್ಲಿ ವೈದ್ಯರು ಮತ್ತು ರೋಗಿಗಳ ನಡುವಿನ ಸಂವಹನ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ, ವೈದ್ಯರು ತಮ್ಮ ಕಾರ್ಯಕ್ಷೇತ್ರದಲ್ಲಿ ರೋಗಿಗಳ ಮಾತೃಭಾಷೆ ಬಳಸಿದಲ್ಲಿ ಉತ್ತಮ ಬಾಂಧವ್ಯ ಬೆಳೆಯುತ್ತದೆ’ ಎಂದರು.