‘ಕನ್ನಡ ಅನುಷ್ಠಾನದ ವಿಚಾರದಲ್ಲಿ ಬ್ಯಾಂಕಿನ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ ಎಂಬ ಕುರಿತು ಹಲವಾರು ದೂರುಗಳು ಪ್ರಾಧಿಕಾರಕ್ಕೆ ಬಂದಿವೆ. ಈ ಬ್ಯಾಂಕಿನ ಶಾಖೆಗಳು ಗ್ರಾಮೀಣ ಭಾಗದಲ್ಲೂ ಇದ್ದು, ಅಲ್ಲಿ ಚಲನ್, ಚೆಕ್ ಹಾಗೂ ಬ್ಯಾಂಕಿಗೆ ಸಂಬಂಧಿಸಿದ ವಿವಿಧ ಅರ್ಜಿ ಪ್ರತಿಗಳು ಇಂಗ್ಲಿಷ್ನಲ್ಲಿರುವುದರಿಂದ ಗ್ರಾಹಕರಿಗೆ ಸಮಸ್ಯೆಯಾಗುತ್ತಿದೆ. ಬ್ಯಾಂಕಿನ ವೆಬ್ ಪೋರ್ಟಲ್ನಲ್ಲಿ ಕನ್ನಡ ಭಾಷೆಯ ಆಯ್ಕೆಯೇ ಇಲ್ಲ. ಕನ್ನಡ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿರುವ ಅಧಿಕಾರಿಗಳ ವಿರುದ್ಧ ಪ್ರಾಧಿಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಎಚ್ಚರಿಕೆ ನೀಡಿದರು.